3:28 PM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ

08/07/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ  ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕರ್ನಾಟಕ  ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 15000 ಹಾಗೂ ವೈಯಕ್ತಿಕ 150000 ಕೈಗಡ ಸಾಲ ಮಾಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಬೆಳೆದ ಬೆಳೆಯ ಮಾರಾಟವಾಗದೆ ನಿತ್ಯ ಸಾಲಗಾರರಿಂದ ಕಿರುಕುಳಕ್ಕೆ ಒಳಗಾಗಿ ಸೋಮವಾರ ತಮ್ಮ ಮನೆ ಹತ್ತಿರ ಇರುವ ಹಳ್ಯಾಳ ನೀರಾವರಿ ಪಂಪ್ಸೆಟ್ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ

ಅಗ್ನಿ ಶಾಮಕ ದಳದ ನೆರವಿನಿಂದ  ಮೃತ ದೇಹವನ್ನು ಹೊರ ತೆಗೆಯಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳಾದ ಸುರೇಶ್ ಮಾದರ್, ಅಗ್ನಿಶಾಮಕ ಹವಾಲ್ದಾರ್ ಮಲ್ಲಿಕಾರ್ಜುನ್ ಬಂದಾಳ, ಅಶೋಕ್ ಮುಡಿಸಿ , ಶಿವಾನಂದ ಹನುಮಾಪುರ ,ನೀಲಪ್ಪ ಹಿರವಾಡಿ ನೇತೃತ್ವ ವಹಿಸಿದ್ದರು.


ಅಥಣಿ ಪೊಲೀಸ್ ಠಾಣೆಯ ಸಿಪಿಐ ಶಂಕರಗೌಡ, ಬಸನಗೌಡ ಪಿಎಸ್ಐ  ಕುಮಾರ್ ಹಾಡ್ಕಾರ್ ಸ್ಥಳ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು