9:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಸಾಲ ಬಾಧೆ: ಅಥಣಿ ಹಲ್ಯಾಳ ಗ್ರಾಮದ ರೈತ ಕಾಲುವೆಗೆ ಹಾರಿ ಆತ್ಮಹತ್ಯೆ

08/07/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ  ಲಕ್ಕಪ್ಪ ಸಿದ್ದಪ್ಪ ಮಲಾಬದಿ (60) ಎಂಬವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕರ್ನಾಟಕ  ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 200000, ವಪಿಕೆಪಿಎಸ್ಸ ಬ್ಯಾಂಕಿನಲ್ಲಿ 15000 ಹಾಗೂ ವೈಯಕ್ತಿಕ 150000 ಕೈಗಡ ಸಾಲ ಮಾಡಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಬೆಳೆದ ಬೆಳೆಯ ಮಾರಾಟವಾಗದೆ ನಿತ್ಯ ಸಾಲಗಾರರಿಂದ ಕಿರುಕುಳಕ್ಕೆ ಒಳಗಾಗಿ ಸೋಮವಾರ ತಮ್ಮ ಮನೆ ಹತ್ತಿರ ಇರುವ ಹಳ್ಯಾಳ ನೀರಾವರಿ ಪಂಪ್ಸೆಟ್ ಕಾಲುವೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ

ಅಗ್ನಿ ಶಾಮಕ ದಳದ ನೆರವಿನಿಂದ  ಮೃತ ದೇಹವನ್ನು ಹೊರ ತೆಗೆಯಲಾಯಿತು. ಅಗ್ನಿಶಾಮಕ ಸಿಬ್ಬಂದಿಗಳಾದ ಸುರೇಶ್ ಮಾದರ್, ಅಗ್ನಿಶಾಮಕ ಹವಾಲ್ದಾರ್ ಮಲ್ಲಿಕಾರ್ಜುನ್ ಬಂದಾಳ, ಅಶೋಕ್ ಮುಡಿಸಿ , ಶಿವಾನಂದ ಹನುಮಾಪುರ ,ನೀಲಪ್ಪ ಹಿರವಾಡಿ ನೇತೃತ್ವ ವಹಿಸಿದ್ದರು.


ಅಥಣಿ ಪೊಲೀಸ್ ಠಾಣೆಯ ಸಿಪಿಐ ಶಂಕರಗೌಡ, ಬಸನಗೌಡ ಪಿಎಸ್ಐ  ಕುಮಾರ್ ಹಾಡ್ಕಾರ್ ಸ್ಥಳ ಪರಿಶೀಲನೆ ನಡೆಸಿದರು. ಅಥಣಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು