3:16 AM Wednesday11 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಶಾಕಿಂಗ್ ನ್ಯೂಸ್: ಸರಕಾರಿ ಶಾಲೆಯನ್ನೇ ಗೋದಾಮು ಮಾಡಿದ ವ್ಯಾಪಾರಿ!; ಶಿಕ್ಷಣ ಸಚಿವರೇ ಏನು ಮಾಡುತ್ತಿದ್ದೀರಿ?

06/02/2023, 10:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಸರಕಾರಿ ಶಾಲಾ ಕಟ್ಟಡಗಳು ಪೋಲಿ ಪೋಕರಿಗಳ ಅಡ್ಡಾ ಆಗಿರೋದನ್ನ ನೀವೆಲ್ಲಾ ನೋಡಿದ್ದಿರಿ, ಕೇಳಿದ್ದೀರಿ. ಆದರೆ ಇಲ್ಲೊಂದು ಶಾಲಾ ಕಟ್ಟಡವನ್ನೇ ವ್ಯಾಪಾರಿಯೊಬ್ಬರು ದವಸ ಧಾನ್ಯ ಇಟ್ಟುಕೊಳ್ಳುವ ಗೊಡೌನ ಮಾಡಿಕೊಂಡಿದ್ದಾರೆ.


ಅಥಣಿ ತಾಲೂಕಿನ ಪಾರ್ಥನಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಶಾಲಾ ಕಟ್ಟಡ ಹಳೆಯದಾದ ಕಾರಣ ವಿದ್ಯಾರ್ಥಿಗಳಿಗೆ ಬೇರೆ ಕಟ್ಟಡದಲ್ಲಿ ವಿದ್ಯಾಭ್ಯಾಸಕ್ಕೆ ಅನುವು ಮಾಡಿ ಕೊಟಡಲಾಗಿದೆ. ಆದರೆ ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷಿ ಎಂಬಂತೆ, ಅದೆ ಗ್ರಾಮದ ವ್ಯಾಪಾರಿಯೊಬ್ಬ ಕಾಳು, ಕಡಿ ಮಾರಾಟ ಮತ್ತು ಖರೀದಿ ಕೇಂದ್ರ ಮಾಡಿಕೊಂಡಿದ್ದಾರೆ. ಇದೆಲ್ಲ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕಿದ್ದರೂ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ.

ಈ ಕುರಿತು ಗ್ರಾಮಸ್ಥರಾದ ರಫೀಕ್ ಪಟೇಲ್ ಮಾಧ್ಯಮದವರೊಂದಿಗೆ ಮಾತನಾಡಿ ಹಲವು ಬಾರಿ ಶಾಲಾ ಕಟ್ಟಡದಲ್ಲಿರುವ ಗೊಡೌನ ತೆರವುಗೊಳಿಸುವಂತೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲಾ ಕೂಡಲೇ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು