7:02 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ವೆಚ್ಚದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೂಮಿಪೂಜೆ

06/02/2023, 13:35

ಸುರತ್ಕಲ್(reporterkarnataka.com): ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ರೂ. ಅನುದಾನದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ರೇಚಕ ಸ್ಥಾವರಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಾನುವಾರ ಸಂಜೆ ಜರುಗಿತು.

ಭೂಮಿಪೂಜೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು, “ಕ್ಷೇತ್ರಕ್ಕೆ 2000 ಕೋಟಿ ರೂ. ಅನುದಾನ ತರುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಇಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಸೆಜ್ ಅಧಿಕಾರಿಗಳು ಹಣವಿಲ್ಲ ಎಂದು ಕೈ ಎತ್ತಿದ್ದರು. ಈ ವೇಳೆ ಅವರೊಂದಿಗೆ ಮಾತುಕತೆ ನಡೆಸಿ ನೀವು ಜಗವನ್ನಾದರೂ ಬಿಟ್ಟಿಕೊಡಿ ಎಂದಿದ್ದಕ್ಕೆ ಅವರು ಜಾಗ ಬಿಟ್ಟುಕೊಟ್ಟಿದ್ದಾರೆ. ಈ ಭಾಗದ ಜನರು ಬಹುಕಾಲದ ಬೇಡಿಕೆಯಾದ ತ್ಯಾಜ್ಯ ನಿರ್ವಹಣಾ ಘಟಕ ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿದೆ” ಎಂದರು.


ಪ್ರಾಸ್ತಾವಿಕ ಮಾತಾಡಿದ ಕಾರ್ಪೋರೇಟರ್ ವರುಣ್ ಚೌಟ ಅವರು, “ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ 2000 ಕೋಟಿ ರೂ. ಅನುದಾನವನ್ನು ತಂದು ಪ್ರತಿನಿತ್ಯ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಈ ಭಾಗದ ಶಾಸಕರು ಅಭಿನಂದನಾರ್ಹರು. ಇಂತಹ ನಾಯಕನ ಜೊತೆಗೆ ಕೆಲಸ ಮಾಡಲು ನಾವು ಹೆಮ್ಮೆ ಪಡುತ್ತೇವೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಹರ್ನಿಶಿ ದುಡಿಯುತ್ತಿರುವ ಶಾಸಕರಿಗೆ ನಾವೆಂದೂ ಚಿರಋಣಿ” ಎಂದರು.
ವೇದಿಕೆಯಲ್ಲಿ ಕಾರ್ಪೋರೇಟರ್ ಗಳಾದ ವರುಣ್ ಚೌಟ, ವೇದಾವತಿ, ರಾಘವೇಂದ್ರ ಕುಡ್ವ, ವಿಜಯ್ ಅಮೀನ್, ಭಾಗ್ಯಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು