1:08 PM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ವೆಚ್ಚದ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೂಮಿಪೂಜೆ

06/02/2023, 13:35

ಸುರತ್ಕಲ್(reporterkarnataka.com): ಕೋಡಿಕೆರೆ ಸೆಜ್ ಕಾಲನಿಯಲ್ಲಿ 15.64 ಕೋಟಿ ರೂ. ಅನುದಾನದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಮತ್ತು ರೇಚಕ ಸ್ಥಾವರಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಾನುವಾರ ಸಂಜೆ ಜರುಗಿತು.

ಭೂಮಿಪೂಜೆ ನೆರವೇರಿಸಿ ಮಾತಾಡಿದ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು, “ಕ್ಷೇತ್ರಕ್ಕೆ 2000 ಕೋಟಿ ರೂ. ಅನುದಾನ ತರುವ ಮೂಲಕ ಜನರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಇಲ್ಲಿ ತ್ಯಾಜ್ಯ ಘಟಕ ನಿರ್ಮಿಸಲು ಸೆಜ್ ಅಧಿಕಾರಿಗಳು ಹಣವಿಲ್ಲ ಎಂದು ಕೈ ಎತ್ತಿದ್ದರು. ಈ ವೇಳೆ ಅವರೊಂದಿಗೆ ಮಾತುಕತೆ ನಡೆಸಿ ನೀವು ಜಗವನ್ನಾದರೂ ಬಿಟ್ಟಿಕೊಡಿ ಎಂದಿದ್ದಕ್ಕೆ ಅವರು ಜಾಗ ಬಿಟ್ಟುಕೊಟ್ಟಿದ್ದಾರೆ. ಈ ಭಾಗದ ಜನರು ಬಹುಕಾಲದ ಬೇಡಿಕೆಯಾದ ತ್ಯಾಜ್ಯ ನಿರ್ವಹಣಾ ಘಟಕ ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿದೆ” ಎಂದರು.


ಪ್ರಾಸ್ತಾವಿಕ ಮಾತಾಡಿದ ಕಾರ್ಪೋರೇಟರ್ ವರುಣ್ ಚೌಟ ಅವರು, “ಕ್ಷೇತ್ರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ 2000 ಕೋಟಿ ರೂ. ಅನುದಾನವನ್ನು ತಂದು ಪ್ರತಿನಿತ್ಯ ಅಭಿವೃದ್ಧಿ ಕಾರ್ಯಗಳಿಗೆ ಭೂಮಿಪೂಜೆ ನೆರವೇರಿಸುತ್ತಿರುವ ಈ ಭಾಗದ ಶಾಸಕರು ಅಭಿನಂದನಾರ್ಹರು. ಇಂತಹ ನಾಯಕನ ಜೊತೆಗೆ ಕೆಲಸ ಮಾಡಲು ನಾವು ಹೆಮ್ಮೆ ಪಡುತ್ತೇವೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅಹರ್ನಿಶಿ ದುಡಿಯುತ್ತಿರುವ ಶಾಸಕರಿಗೆ ನಾವೆಂದೂ ಚಿರಋಣಿ” ಎಂದರು.
ವೇದಿಕೆಯಲ್ಲಿ ಕಾರ್ಪೋರೇಟರ್ ಗಳಾದ ವರುಣ್ ಚೌಟ, ವೇದಾವತಿ, ರಾಘವೇಂದ್ರ ಕುಡ್ವ, ವಿಜಯ್ ಅಮೀನ್, ಭಾಗ್ಯಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು