7:12 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕಾಡು ಹಂದಿ ಉರುಳಿಗೆ ಸಿಲುಕಿ ಚಿರತೆ ಸಾವು; ತೋಟದ ಮಾಲೀಕ, ದುಷ್ಕರ್ಮಿಗಳ ವಿರುದ್ಧ ಕೇಸು ದಾಖಲು

07/02/2023, 21:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka @gmail.com

ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣ ಗೌಡ ಎಂಬುವವರ ಸುಮಾರು 10 ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ. ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು 3 ವರ್ಷದ ಚಿರತೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವೇ ಅಡಿ ದೂರದ ಅಂತರದಲ್ಲಿ ಚಿರತೆಯು ಉರುಳಿಗೆ ಬಿದ್ದಿದ್ದು ಈ ವೇಳೆ ಕೂಗಾಟವನ್ನು ಕೇಳಿ ದಾರಿಯಲ್ಲಿ ಹೋಗುವ ಪ್ರಯಾಣಿಕರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ರಾತ್ರಿಯೇ ತೆರಳಿದ ಅಧಿಕಾರಿಗಳು ಚಿರತೆಯನ್ನು ಬದುಕಿಸಲು ಪ್ರಯತ್ನಪಟ್ಟಿದ್ದು ಉರುಳು ಕುತ್ತಿಗೆ ಬಲವಾಗಿ ಸಿಲುಕಿದ್ದ ಕಾರಣ ಮೃತಪಡುವ ಹಂತಕ್ಕೆ ತಲುಪಿದ್ದು, ರಕ್ಷಣೆ ಮಾಡುವ ವೇಳೆಗೆ ಮೃತಪಟ್ಟಿದೆ. ಈ ಸಂಬಂಧ ತೋಟದ ಮಾಲೀಕರು ಮತ್ತು ಉರುಳು ಹಾಕಿದ ದುಷ್ಕರ್ಮಿಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದು. ಮೂಡಿಗೆರೆ ಅರಣ್ಯ ಇಲಾಖೆಗೆ ಶವ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆಯ ನಂತರ ಚಿರತೆಯ ಶವವನ್ನು ಅಗ್ನಿಸ್ಪರ್ಷ ಮೂಲಕ ಸಂಸ್ಕಾರ ನಡೆಸಲು ತಿರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು