7:39 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಒಳ್ಳೆಯ ಕೆಲಸಗಳ ಜತೆ ಯಾವಾಗಲೂ ನಾನಿದ್ದೇನೆ: ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್

08/02/2023, 18:43

ಕಲ್ಲಡ್ಕ(reporterkarnataka.com): ಶಾಸಕನಾಗಿ ಇರಲಿ ಅಥವಾ ಇಲ್ಲದಿರಲಿ ಒಳ್ಳೆಯ ಕೆಲಸಗಳ ಜೊತೆ ಯಾವಾಗಲೂ ನಾನಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.

ಬಂಟ್ವಾಳ ತಾಲೂಕು ವಿಟ್ಲಮುಡ್ನರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತನ್ನ ಅನುದಾನದಲ್ಲಿ ಸುಮಾರು 14 ಲಕ್ಷ ವೆಚ್ಚದ ನಿರ್ಮಾಣಗೊಳ್ಳಲಿರುವ ಕಲಿಕಾ ಕೊಠಡಿಯ ಶಿಲನ್ಯಾಸ ಮಾಡಿ, ಮುತ್ತೊಟ್ಟು ಫೈನಾನ್ಸ್ ವತಿಯಿಂದ ನಿರ್ಮಿಸಲ್ಪಟ್ಟ ಬಾಲವನವನ, ಹಾಗೂ ವಿಟ್ಲ ಮುಡ್ನರು ಗ್ರಾಮ ಪಂಚಾಯತ್ ವತಿಯಿಂದ ನರೇಗಾ ಯೋಜನೆಯ ಅಡಿಯಲ್ಲಿ ನಿರ್ಮಿಸಲ್ಪಟ್ಟ ಶಾಲಾ ಆವರಣ ಗೋಡೆ ಹಾಗೂ ಆಟದ ಮೈದಾನ ವಿಸ್ತರಣಾ, ಹರೀಶ್ ಮುಜಾಲ ಒದಗಿಸಿಕೊಟ್ಟ ಬಾಸ್ಕೆಟ್ ಬಾಲ್ ಕ್ರೀಡಾ ಸಲಕರಣೆ ಮೊದಲಾದ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತಾಡಿದರು.

ತನ್ನ ಕ್ಷೇತ್ರದ ಹಳ್ಳಿ ಪ್ರದೇಶದ ಏಮಾಜೆ ಶಾಲೆಯನ್ನು ಬಾಲವನ ನಿರ್ಮಿಸಲು ಆಯ್ಕೆ ಮಾಡಿ ಬಹಳ ಸುಂದರವಾಗಿ ಬಾಲವನ ನಿರ್ಮಿಸಿಕೊಟ್ಟ ಮುತ್ತೂಟ್ ಫೈನಾನ್ಸಿನ ಸಂಸ್ಥೆಯನ್ನು ಶಾಸಕರು ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಟ್ಲ ಮುಟ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲೆಗೆ ಸಹಕರಿಸಿದ ವಿವಿಧಗಣ್ಯರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಪಂಚಾಯತ್ ಸದಸ್ಯರಾದ ಸವಿತಾ ಡಿ ಪೂಜಾರಿ, ಧನಂಜಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾ ಗಣೇಶ್ ಆಚಾರ್ಯ, ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ ಮೈಕೆ, ಮುತ್ತೂಟ್ ಫೈನಾನ್ಸಿನ ಪುತ್ತೂರು ಕ್ಲಸ್ಟರ್ ಮೆನೇಜರ್ ಸಂದೇಶ್ ಶೆಣೈ, ಪುತ್ತೂರು ಬ್ರಾಂಚ್ ಮ್ಯಾನೇಜರ್ ನವೀನ್ ಎ., ಪ್ರಸಾದ್ ಕುಮಾರ್ (ಮೆನೇಜರ್ ಸಿ ಎಸ್ ಆರ್ ಮಂಗಳೂರು), ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿದರು. ಗೌರವ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು