10:54 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಒಳ್ಳೆಯ ಕೆಲಸಗಳ ಜತೆ ಯಾವಾಗಲೂ ನಾನಿದ್ದೇನೆ: ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್

08/02/2023, 18:43

ಕಲ್ಲಡ್ಕ(reporterkarnataka.com): ಶಾಸಕನಾಗಿ ಇರಲಿ ಅಥವಾ ಇಲ್ಲದಿರಲಿ ಒಳ್ಳೆಯ ಕೆಲಸಗಳ ಜೊತೆ ಯಾವಾಗಲೂ ನಾನಿದ್ದೇನೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹೇಳಿದರು.

ಬಂಟ್ವಾಳ ತಾಲೂಕು ವಿಟ್ಲಮುಡ್ನರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತನ್ನ ಅನುದಾನದಲ್ಲಿ ಸುಮಾರು 14 ಲಕ್ಷ ವೆಚ್ಚದ ನಿರ್ಮಾಣಗೊಳ್ಳಲಿರುವ ಕಲಿಕಾ ಕೊಠಡಿಯ ಶಿಲನ್ಯಾಸ ಮಾಡಿ, ಮುತ್ತೊಟ್ಟು ಫೈನಾನ್ಸ್ ವತಿಯಿಂದ ನಿರ್ಮಿಸಲ್ಪಟ್ಟ ಬಾಲವನವನ, ಹಾಗೂ ವಿಟ್ಲ ಮುಡ್ನರು ಗ್ರಾಮ ಪಂಚಾಯತ್ ವತಿಯಿಂದ ನರೇಗಾ ಯೋಜನೆಯ ಅಡಿಯಲ್ಲಿ ನಿರ್ಮಿಸಲ್ಪಟ್ಟ ಶಾಲಾ ಆವರಣ ಗೋಡೆ ಹಾಗೂ ಆಟದ ಮೈದಾನ ವಿಸ್ತರಣಾ, ಹರೀಶ್ ಮುಜಾಲ ಒದಗಿಸಿಕೊಟ್ಟ ಬಾಸ್ಕೆಟ್ ಬಾಲ್ ಕ್ರೀಡಾ ಸಲಕರಣೆ ಮೊದಲಾದ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತಾಡಿದರು.

ತನ್ನ ಕ್ಷೇತ್ರದ ಹಳ್ಳಿ ಪ್ರದೇಶದ ಏಮಾಜೆ ಶಾಲೆಯನ್ನು ಬಾಲವನ ನಿರ್ಮಿಸಲು ಆಯ್ಕೆ ಮಾಡಿ ಬಹಳ ಸುಂದರವಾಗಿ ಬಾಲವನ ನಿರ್ಮಿಸಿಕೊಟ್ಟ ಮುತ್ತೂಟ್ ಫೈನಾನ್ಸಿನ ಸಂಸ್ಥೆಯನ್ನು ಶಾಸಕರು ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಟ್ಲ ಮುಟ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಚ್ಚಿದಾನಂದ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲೆಗೆ ಸಹಕರಿಸಿದ ವಿವಿಧಗಣ್ಯರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಪಂಚಾಯತ್ ಸದಸ್ಯರಾದ ಸವಿತಾ ಡಿ ಪೂಜಾರಿ, ಧನಂಜಯ ಗೌಡ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಲ್ಲಿಕಾ ಗಣೇಶ್ ಆಚಾರ್ಯ, ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ ಮೈಕೆ, ಮುತ್ತೂಟ್ ಫೈನಾನ್ಸಿನ ಪುತ್ತೂರು ಕ್ಲಸ್ಟರ್ ಮೆನೇಜರ್ ಸಂದೇಶ್ ಶೆಣೈ, ಪುತ್ತೂರು ಬ್ರಾಂಚ್ ಮ್ಯಾನೇಜರ್ ನವೀನ್ ಎ., ಪ್ರಸಾದ್ ಕುಮಾರ್ (ಮೆನೇಜರ್ ಸಿ ಎಸ್ ಆರ್ ಮಂಗಳೂರು), ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿ ರಮೇಶ್ ಸ್ವಾಗತಿಸಿದರು. ಗೌರವ ಶಿಕ್ಷಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು