3:40 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಚಿತ್ರಾಪುರ ದುರ್ಗಾಪರಮೇಶ್ವರಿ ದೇಗುಲ ಆಮಂತ್ರಣ ಪತ್ರಿಕೆ ಬಿಡುಗಡೆ: ಪೇಜಾವರ ಶ್ರೀ, ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ

08/02/2023, 20:40

ಸುರತ್ಕಲ್(reporterkarnataka.com):
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ಶ್ರೀಪಾದರು ಹಾಗೂ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಶಾಸಕರೂ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಡಾ. ಭರತ್ ಶೆಟ್ಟಿ ವೈ. ಮಾತನಾಡಿ, ಕ್ಷೇತ್ರದಲ್ಲಿ 2 ಕೋಟಿ ರೂ. ಸರಕಾರದ ಅನುದಾನ ಮತ್ತು ಭಕ್ತರು ದಾನಿಗಳ ಅಂದಾಜು 8-10 ಕೋಟಿ ರೂ.ಗಳ ನೆರವಿನಿಂದ ಜೀರ್ಣೋದ್ಧಾರ ಸಮಿತಿ ಮುಂದಾಳತ್ವ , ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಮುಂದೆ 15 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು ಇದೇ ರೀತಿ ಭಕ್ತರ, ಹಿಂದೂ ಸಂಘಟನೆಗಳ ಮತ್ತು ಮೊಗವೀರ ಸಮಾಜ ಬಾಂಧವರಿಂದ ಸಹಕಾರದಲ್ಲಿ ಯಶಸ್ವಿಯಾಗಿ ನಡೆಯಬೇಕೆಂದರು.


ಕಾರ್ಪೋರೇಟರ್ ಸುಮಿತ್ರಾ ಕರಿಯ, ಪ್ರಮುಖರಾದ ಉಮೇಶ್ ಟಿ. ಕರ್ಕೇರ, ವಿಷ್ಣುಮೂರ್ತಿ ಏಗಳ್, ಲಕ್ಷ್ಮಣ ಅಮೀನ್, ಭರತ್ ಕುಮಾರ್, ಕೇಶವ ಸಾಲಿಯಾನ್, ಗಣೇಶ್ ಹೊಸಬೆಟ್ಟು, ಎನ್. ಆರ್ ಪುರುಷೋತ್ತಮ, ಹೆಚ್ ಎಲ್ ರಾವ್, ದೇವಿಪ್ರಸಾದ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್, ಕೃಷ್ಣ ಶೆಟ್ಟಿ, ಶ್ರೀಧರ್ ದೇವಾಡಿಗ, ಮೋಹನ್ ಕರ್ಕೇರ, ರೋಹಿದಾಸ್ ಸಾಲಿಯಾನ್, ಚಂದ್ರಶೇಖರ ಎಂಸಿಸಿ, ಓಂದಾಸ್ ಕಾಂಚನ್, ಹರೀಶ್ಚಂದ್ರ ಕರ್ಕೇರ, ದಿನೇಶ್ ಕರ್ಕೇರ, ಆಶಾಕಿರಣ ರೈ, ಪವಿತ್ರ ಕೋಡಿಕೆರೆ, ಶಿವಾಜಿ ದೇವಾಡಿಗ, ನಿಶ್ಚಲ್ ನಿಖಿಲ್, ದಿವಾಕರ್ ಉದ್ಯಾವರ, ಲೀಲಾಧರ ಕೋಡಿಕಲ್, ಚಂದ್ರಹಾಸ್ ಕರ್ಕೇರ, ಗಿರೀಶ್ ಶ್ರೀಯನ್, ಸುಕುಮಾರ್ ದೇವಾಡಿಗ, ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು