1:33 AM Friday11 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:…

ಇತ್ತೀಚಿನ ಸುದ್ದಿ

ಚಿತ್ರಾಪುರ ದುರ್ಗಾಪರಮೇಶ್ವರಿ ದೇಗುಲ ಆಮಂತ್ರಣ ಪತ್ರಿಕೆ ಬಿಡುಗಡೆ: ಪೇಜಾವರ ಶ್ರೀ, ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ

08/02/2023, 20:40

ಸುರತ್ಕಲ್(reporterkarnataka.com):
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ಶ್ರೀಪಾದರು ಹಾಗೂ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಶಾಸಕರೂ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಡಾ. ಭರತ್ ಶೆಟ್ಟಿ ವೈ. ಮಾತನಾಡಿ, ಕ್ಷೇತ್ರದಲ್ಲಿ 2 ಕೋಟಿ ರೂ. ಸರಕಾರದ ಅನುದಾನ ಮತ್ತು ಭಕ್ತರು ದಾನಿಗಳ ಅಂದಾಜು 8-10 ಕೋಟಿ ರೂ.ಗಳ ನೆರವಿನಿಂದ ಜೀರ್ಣೋದ್ಧಾರ ಸಮಿತಿ ಮುಂದಾಳತ್ವ , ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಮುಂದೆ 15 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು ಇದೇ ರೀತಿ ಭಕ್ತರ, ಹಿಂದೂ ಸಂಘಟನೆಗಳ ಮತ್ತು ಮೊಗವೀರ ಸಮಾಜ ಬಾಂಧವರಿಂದ ಸಹಕಾರದಲ್ಲಿ ಯಶಸ್ವಿಯಾಗಿ ನಡೆಯಬೇಕೆಂದರು.


ಕಾರ್ಪೋರೇಟರ್ ಸುಮಿತ್ರಾ ಕರಿಯ, ಪ್ರಮುಖರಾದ ಉಮೇಶ್ ಟಿ. ಕರ್ಕೇರ, ವಿಷ್ಣುಮೂರ್ತಿ ಏಗಳ್, ಲಕ್ಷ್ಮಣ ಅಮೀನ್, ಭರತ್ ಕುಮಾರ್, ಕೇಶವ ಸಾಲಿಯಾನ್, ಗಣೇಶ್ ಹೊಸಬೆಟ್ಟು, ಎನ್. ಆರ್ ಪುರುಷೋತ್ತಮ, ಹೆಚ್ ಎಲ್ ರಾವ್, ದೇವಿಪ್ರಸಾದ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್, ಕೃಷ್ಣ ಶೆಟ್ಟಿ, ಶ್ರೀಧರ್ ದೇವಾಡಿಗ, ಮೋಹನ್ ಕರ್ಕೇರ, ರೋಹಿದಾಸ್ ಸಾಲಿಯಾನ್, ಚಂದ್ರಶೇಖರ ಎಂಸಿಸಿ, ಓಂದಾಸ್ ಕಾಂಚನ್, ಹರೀಶ್ಚಂದ್ರ ಕರ್ಕೇರ, ದಿನೇಶ್ ಕರ್ಕೇರ, ಆಶಾಕಿರಣ ರೈ, ಪವಿತ್ರ ಕೋಡಿಕೆರೆ, ಶಿವಾಜಿ ದೇವಾಡಿಗ, ನಿಶ್ಚಲ್ ನಿಖಿಲ್, ದಿವಾಕರ್ ಉದ್ಯಾವರ, ಲೀಲಾಧರ ಕೋಡಿಕಲ್, ಚಂದ್ರಹಾಸ್ ಕರ್ಕೇರ, ಗಿರೀಶ್ ಶ್ರೀಯನ್, ಸುಕುಮಾರ್ ದೇವಾಡಿಗ, ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು