5:33 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಚಿತ್ರಾಪುರ ದುರ್ಗಾಪರಮೇಶ್ವರಿ ದೇಗುಲ ಆಮಂತ್ರಣ ಪತ್ರಿಕೆ ಬಿಡುಗಡೆ: ಪೇಜಾವರ ಶ್ರೀ, ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ

08/02/2023, 20:40

ಸುರತ್ಕಲ್(reporterkarnataka.com):
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ಶ್ರೀಪಾದರು ಹಾಗೂ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಶಾಸಕರೂ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಡಾ. ಭರತ್ ಶೆಟ್ಟಿ ವೈ. ಮಾತನಾಡಿ, ಕ್ಷೇತ್ರದಲ್ಲಿ 2 ಕೋಟಿ ರೂ. ಸರಕಾರದ ಅನುದಾನ ಮತ್ತು ಭಕ್ತರು ದಾನಿಗಳ ಅಂದಾಜು 8-10 ಕೋಟಿ ರೂ.ಗಳ ನೆರವಿನಿಂದ ಜೀರ್ಣೋದ್ಧಾರ ಸಮಿತಿ ಮುಂದಾಳತ್ವ , ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಮುಂದೆ 15 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು ಇದೇ ರೀತಿ ಭಕ್ತರ, ಹಿಂದೂ ಸಂಘಟನೆಗಳ ಮತ್ತು ಮೊಗವೀರ ಸಮಾಜ ಬಾಂಧವರಿಂದ ಸಹಕಾರದಲ್ಲಿ ಯಶಸ್ವಿಯಾಗಿ ನಡೆಯಬೇಕೆಂದರು.


ಕಾರ್ಪೋರೇಟರ್ ಸುಮಿತ್ರಾ ಕರಿಯ, ಪ್ರಮುಖರಾದ ಉಮೇಶ್ ಟಿ. ಕರ್ಕೇರ, ವಿಷ್ಣುಮೂರ್ತಿ ಏಗಳ್, ಲಕ್ಷ್ಮಣ ಅಮೀನ್, ಭರತ್ ಕುಮಾರ್, ಕೇಶವ ಸಾಲಿಯಾನ್, ಗಣೇಶ್ ಹೊಸಬೆಟ್ಟು, ಎನ್. ಆರ್ ಪುರುಷೋತ್ತಮ, ಹೆಚ್ ಎಲ್ ರಾವ್, ದೇವಿಪ್ರಸಾದ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್, ಕೃಷ್ಣ ಶೆಟ್ಟಿ, ಶ್ರೀಧರ್ ದೇವಾಡಿಗ, ಮೋಹನ್ ಕರ್ಕೇರ, ರೋಹಿದಾಸ್ ಸಾಲಿಯಾನ್, ಚಂದ್ರಶೇಖರ ಎಂಸಿಸಿ, ಓಂದಾಸ್ ಕಾಂಚನ್, ಹರೀಶ್ಚಂದ್ರ ಕರ್ಕೇರ, ದಿನೇಶ್ ಕರ್ಕೇರ, ಆಶಾಕಿರಣ ರೈ, ಪವಿತ್ರ ಕೋಡಿಕೆರೆ, ಶಿವಾಜಿ ದೇವಾಡಿಗ, ನಿಶ್ಚಲ್ ನಿಖಿಲ್, ದಿವಾಕರ್ ಉದ್ಯಾವರ, ಲೀಲಾಧರ ಕೋಡಿಕಲ್, ಚಂದ್ರಹಾಸ್ ಕರ್ಕೇರ, ಗಿರೀಶ್ ಶ್ರೀಯನ್, ಸುಕುಮಾರ್ ದೇವಾಡಿಗ, ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು