1:39 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಚಿತ್ರಾಪುರ ದುರ್ಗಾಪರಮೇಶ್ವರಿ ದೇಗುಲ ಆಮಂತ್ರಣ ಪತ್ರಿಕೆ ಬಿಡುಗಡೆ: ಪೇಜಾವರ ಶ್ರೀ, ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ

08/02/2023, 20:40

ಸುರತ್ಕಲ್(reporterkarnataka.com):
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ಶ್ರೀಪಾದರು ಹಾಗೂ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಶಾಸಕರೂ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಡಾ. ಭರತ್ ಶೆಟ್ಟಿ ವೈ. ಮಾತನಾಡಿ, ಕ್ಷೇತ್ರದಲ್ಲಿ 2 ಕೋಟಿ ರೂ. ಸರಕಾರದ ಅನುದಾನ ಮತ್ತು ಭಕ್ತರು ದಾನಿಗಳ ಅಂದಾಜು 8-10 ಕೋಟಿ ರೂ.ಗಳ ನೆರವಿನಿಂದ ಜೀರ್ಣೋದ್ಧಾರ ಸಮಿತಿ ಮುಂದಾಳತ್ವ , ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಮುಂದೆ 15 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು ಇದೇ ರೀತಿ ಭಕ್ತರ, ಹಿಂದೂ ಸಂಘಟನೆಗಳ ಮತ್ತು ಮೊಗವೀರ ಸಮಾಜ ಬಾಂಧವರಿಂದ ಸಹಕಾರದಲ್ಲಿ ಯಶಸ್ವಿಯಾಗಿ ನಡೆಯಬೇಕೆಂದರು.


ಕಾರ್ಪೋರೇಟರ್ ಸುಮಿತ್ರಾ ಕರಿಯ, ಪ್ರಮುಖರಾದ ಉಮೇಶ್ ಟಿ. ಕರ್ಕೇರ, ವಿಷ್ಣುಮೂರ್ತಿ ಏಗಳ್, ಲಕ್ಷ್ಮಣ ಅಮೀನ್, ಭರತ್ ಕುಮಾರ್, ಕೇಶವ ಸಾಲಿಯಾನ್, ಗಣೇಶ್ ಹೊಸಬೆಟ್ಟು, ಎನ್. ಆರ್ ಪುರುಷೋತ್ತಮ, ಹೆಚ್ ಎಲ್ ರಾವ್, ದೇವಿಪ್ರಸಾದ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್, ಕೃಷ್ಣ ಶೆಟ್ಟಿ, ಶ್ರೀಧರ್ ದೇವಾಡಿಗ, ಮೋಹನ್ ಕರ್ಕೇರ, ರೋಹಿದಾಸ್ ಸಾಲಿಯಾನ್, ಚಂದ್ರಶೇಖರ ಎಂಸಿಸಿ, ಓಂದಾಸ್ ಕಾಂಚನ್, ಹರೀಶ್ಚಂದ್ರ ಕರ್ಕೇರ, ದಿನೇಶ್ ಕರ್ಕೇರ, ಆಶಾಕಿರಣ ರೈ, ಪವಿತ್ರ ಕೋಡಿಕೆರೆ, ಶಿವಾಜಿ ದೇವಾಡಿಗ, ನಿಶ್ಚಲ್ ನಿಖಿಲ್, ದಿವಾಕರ್ ಉದ್ಯಾವರ, ಲೀಲಾಧರ ಕೋಡಿಕಲ್, ಚಂದ್ರಹಾಸ್ ಕರ್ಕೇರ, ಗಿರೀಶ್ ಶ್ರೀಯನ್, ಸುಕುಮಾರ್ ದೇವಾಡಿಗ, ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು