7:39 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಚಿತ್ರಾಪುರ ದುರ್ಗಾಪರಮೇಶ್ವರಿ ದೇಗುಲ ಆಮಂತ್ರಣ ಪತ್ರಿಕೆ ಬಿಡುಗಡೆ: ಪೇಜಾವರ ಶ್ರೀ, ಶಾಸಕ ಡಾ. ಭರತ್ ಶೆಟ್ಟಿ ಉಪಸ್ಥಿತಿ

08/02/2023, 20:40

ಸುರತ್ಕಲ್(reporterkarnataka.com):
ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ಶ್ರೀಪಾದರು ಹಾಗೂ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

ಶಾಸಕರೂ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರೂ ಆದ ಡಾ. ಭರತ್ ಶೆಟ್ಟಿ ವೈ. ಮಾತನಾಡಿ, ಕ್ಷೇತ್ರದಲ್ಲಿ 2 ಕೋಟಿ ರೂ. ಸರಕಾರದ ಅನುದಾನ ಮತ್ತು ಭಕ್ತರು ದಾನಿಗಳ ಅಂದಾಜು 8-10 ಕೋಟಿ ರೂ.ಗಳ ನೆರವಿನಿಂದ ಜೀರ್ಣೋದ್ಧಾರ ಸಮಿತಿ ಮುಂದಾಳತ್ವ , ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುವ ಹಂತದಲ್ಲಿದೆ. ಮುಂದೆ 15 ದಿನಗಳ ಕಾಲ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳು ಇದೇ ರೀತಿ ಭಕ್ತರ, ಹಿಂದೂ ಸಂಘಟನೆಗಳ ಮತ್ತು ಮೊಗವೀರ ಸಮಾಜ ಬಾಂಧವರಿಂದ ಸಹಕಾರದಲ್ಲಿ ಯಶಸ್ವಿಯಾಗಿ ನಡೆಯಬೇಕೆಂದರು.


ಕಾರ್ಪೋರೇಟರ್ ಸುಮಿತ್ರಾ ಕರಿಯ, ಪ್ರಮುಖರಾದ ಉಮೇಶ್ ಟಿ. ಕರ್ಕೇರ, ವಿಷ್ಣುಮೂರ್ತಿ ಏಗಳ್, ಲಕ್ಷ್ಮಣ ಅಮೀನ್, ಭರತ್ ಕುಮಾರ್, ಕೇಶವ ಸಾಲಿಯಾನ್, ಗಣೇಶ್ ಹೊಸಬೆಟ್ಟು, ಎನ್. ಆರ್ ಪುರುಷೋತ್ತಮ, ಹೆಚ್ ಎಲ್ ರಾವ್, ದೇವಿಪ್ರಸಾದ್ ಶೆಟ್ಟಿ, ಹರೀಶ್ ಶೆಟ್ಟಿ, ಸುರೇಶ್, ಕೃಷ್ಣ ಶೆಟ್ಟಿ, ಶ್ರೀಧರ್ ದೇವಾಡಿಗ, ಮೋಹನ್ ಕರ್ಕೇರ, ರೋಹಿದಾಸ್ ಸಾಲಿಯಾನ್, ಚಂದ್ರಶೇಖರ ಎಂಸಿಸಿ, ಓಂದಾಸ್ ಕಾಂಚನ್, ಹರೀಶ್ಚಂದ್ರ ಕರ್ಕೇರ, ದಿನೇಶ್ ಕರ್ಕೇರ, ಆಶಾಕಿರಣ ರೈ, ಪವಿತ್ರ ಕೋಡಿಕೆರೆ, ಶಿವಾಜಿ ದೇವಾಡಿಗ, ನಿಶ್ಚಲ್ ನಿಖಿಲ್, ದಿವಾಕರ್ ಉದ್ಯಾವರ, ಲೀಲಾಧರ ಕೋಡಿಕಲ್, ಚಂದ್ರಹಾಸ್ ಕರ್ಕೇರ, ಗಿರೀಶ್ ಶ್ರೀಯನ್, ಸುಕುಮಾರ್ ದೇವಾಡಿಗ, ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು