3:41 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಕುಲಪತಿ ಹುದ್ದೆಗೆ ಲಂಚ: ಪ್ರಾಧ್ಯಾಪಕ ಮೇಲಿನ ಪ್ರಕರಣವನ್ನು ಮುಚ್ಚಿ ಹಾಕಿದ ಮಂಗಳೂರು ವಿವಿ!; ಪ್ರಭಾವಿಗಳ ಒತ್ತಡ ಕಾರಣ?

09/02/2023, 21:05

ಮಂಗಳೂರು(reporterkarnataka.com): ಕುಲಪತಿ ಹುದ್ದೆಗಾಗಿ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಲಂಚ ಕೊಟ್ಟ ಪ್ರಕರಣವನ್ನು ವಿವಿ ಆಡಳಿತ ಮುಚ್ಚಿ ಹಾಕಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪ್ರಾಧ್ಯಾಪಕನ ವಿರುದ್ದ ಕ್ರಮ ಕೈಗೊಳ್ಳದೇ ಇತ್ಯರ್ಥ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳೂರು ವಿವಿ ಪ್ರಾಧ್ಯಾಪಕ ಜಯಶಂಕರ್ ಅವರು ರಾಯಚೂರು ವಿವಿ ಕುಲಪತಿ ಹುದ್ದೆ ಪಡೆಯಲು ಲಂಚ ಕೊಟ್ಟಿದ್ದರು. ಮಂಗಳೂರು ವಿವಿ ಜೀವ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಅವರು 16 ಲಕ್ಷ ಲಂಚ ಕೊಟ್ಟರೂ ಕುಲಪತಿ ಹುದ್ದೆ ಸಿಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ
ಪ್ರಕರಣ ದಾಖಲಾಗಿತ್ತು, ಈ ಮಧ್ಯೆ ಕುಲಪತಿ ಹುದ್ದೆ ಪಡೆಯಲು ಲಂಚ ನೀಡಿದ್ದ ಜಯಶಂಕರ್ ಗೆ ಮಂಗಳೂರು ವಿವಿ ಸಿಂಡಿಕೇಟ್ ನೋಟೀಸ್ ನೀಡಿತ್ತು. 2021ರ ಏ.9 ರ ಸಿಂಡಿಕೇಟ್ ಸಭೆಯಲ್ಲಿ ಜಯಶಂಕರ್ ಅಮಾನತು ಮಾಡಿ ಇಲಾಖಾ ತನಿಖೆಗೆ ಆದೇಶ ನೀಡಿದ್ದರು.

ನಿವೃತ್ತ ಜಿಲ್ಲಾ ಜಡ್ಜ್ ಬೈಲೂರು ಶಂಕರ ರಾಮ ಸಮಿತಿ ಈ ಕುರಿತು ತನಿಖೆ ನಡೆಸಿ 2022ರ ಜೂನ್ 1ರಂದು ತನಿಖಾ ವರದಿ ಸಲ್ಲಿಸಿತ್ತು. ತನಿಖೆಯಲ್ಲಿ ಜಯಶಂಕರ್ ಅವರು ಕುಲಪತಿ ಹುದ್ದೆಗೆ ಲಂಚ ಕೊಟ್ಟಿರುವುದು ದೃಢಪಟ್ಟಿತ್ತು.
ಕುಲಪತಿ ಹುದ್ದೆ ಪಡೆಯಲು ನ್ಯಾಯೋಚಿತವಲ್ಲದ ದಾರಿಯಲ್ಲಿ ಹಣ ನೀಡಿದ್ದು ಸರಿಯಲ್ಲ. ಮಂಗಳೂರು ವಿವಿಯ ಹೆಸರು, ಘನತೆ, ಪ್ರತಿಷ್ಠೆ ಕೆಳಮಟ್ಟಕ್ಕೆ ಇಳಿದಂತಾಗಿದೆ. ಮಂಗಳೂರು ವಿವಿ ಉದ್ಯೋಗಿಗಳ ಸೇವಾ ನಡತೆ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಸಮಿತಿ ವರದಿ ನೀಡಿತ್ತು. ಆದರೆ ಮಂಗಳೂರು ವಿಶ್ವ ವಿದ್ಯಾನಿಲಯ ಜಯಶಂಕರ್ ಹಣ ನೀಡಿರುವುದು ದೃಢಪಟ್ಟರೂ ಪ್ರಾಧ್ಯಾಪಕ ಜಯಶಂಕರ್ ಗೆ ತಿಳುವಳಿಗೆ ಪತ್ರ ನೀಡಿ ಪ್ರಕರಣ ಇತ್ಯರ್ಥಗೊಳಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು