12:13 PM Wednesday11 - March 2026
ಬ್ರೇಕಿಂಗ್ ನ್ಯೂಸ್
ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ

ಇತ್ತೀಚಿನ ಸುದ್ದಿ

ಕುಲಪತಿ ಹುದ್ದೆಗೆ ಲಂಚ: ಪ್ರಾಧ್ಯಾಪಕ ಮೇಲಿನ ಪ್ರಕರಣವನ್ನು ಮುಚ್ಚಿ ಹಾಕಿದ ಮಂಗಳೂರು ವಿವಿ!; ಪ್ರಭಾವಿಗಳ ಒತ್ತಡ ಕಾರಣ?

09/02/2023, 21:05

ಮಂಗಳೂರು(reporterkarnataka.com): ಕುಲಪತಿ ಹುದ್ದೆಗಾಗಿ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಲಂಚ ಕೊಟ್ಟ ಪ್ರಕರಣವನ್ನು ವಿವಿ ಆಡಳಿತ ಮುಚ್ಚಿ ಹಾಕಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪ್ರಾಧ್ಯಾಪಕನ ವಿರುದ್ದ ಕ್ರಮ ಕೈಗೊಳ್ಳದೇ ಇತ್ಯರ್ಥ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳೂರು ವಿವಿ ಪ್ರಾಧ್ಯಾಪಕ ಜಯಶಂಕರ್ ಅವರು ರಾಯಚೂರು ವಿವಿ ಕುಲಪತಿ ಹುದ್ದೆ ಪಡೆಯಲು ಲಂಚ ಕೊಟ್ಟಿದ್ದರು. ಮಂಗಳೂರು ವಿವಿ ಜೀವ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಅವರು 16 ಲಕ್ಷ ಲಂಚ ಕೊಟ್ಟರೂ ಕುಲಪತಿ ಹುದ್ದೆ ಸಿಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ
ಪ್ರಕರಣ ದಾಖಲಾಗಿತ್ತು, ಈ ಮಧ್ಯೆ ಕುಲಪತಿ ಹುದ್ದೆ ಪಡೆಯಲು ಲಂಚ ನೀಡಿದ್ದ ಜಯಶಂಕರ್ ಗೆ ಮಂಗಳೂರು ವಿವಿ ಸಿಂಡಿಕೇಟ್ ನೋಟೀಸ್ ನೀಡಿತ್ತು. 2021ರ ಏ.9 ರ ಸಿಂಡಿಕೇಟ್ ಸಭೆಯಲ್ಲಿ ಜಯಶಂಕರ್ ಅಮಾನತು ಮಾಡಿ ಇಲಾಖಾ ತನಿಖೆಗೆ ಆದೇಶ ನೀಡಿದ್ದರು.

ನಿವೃತ್ತ ಜಿಲ್ಲಾ ಜಡ್ಜ್ ಬೈಲೂರು ಶಂಕರ ರಾಮ ಸಮಿತಿ ಈ ಕುರಿತು ತನಿಖೆ ನಡೆಸಿ 2022ರ ಜೂನ್ 1ರಂದು ತನಿಖಾ ವರದಿ ಸಲ್ಲಿಸಿತ್ತು. ತನಿಖೆಯಲ್ಲಿ ಜಯಶಂಕರ್ ಅವರು ಕುಲಪತಿ ಹುದ್ದೆಗೆ ಲಂಚ ಕೊಟ್ಟಿರುವುದು ದೃಢಪಟ್ಟಿತ್ತು.
ಕುಲಪತಿ ಹುದ್ದೆ ಪಡೆಯಲು ನ್ಯಾಯೋಚಿತವಲ್ಲದ ದಾರಿಯಲ್ಲಿ ಹಣ ನೀಡಿದ್ದು ಸರಿಯಲ್ಲ. ಮಂಗಳೂರು ವಿವಿಯ ಹೆಸರು, ಘನತೆ, ಪ್ರತಿಷ್ಠೆ ಕೆಳಮಟ್ಟಕ್ಕೆ ಇಳಿದಂತಾಗಿದೆ. ಮಂಗಳೂರು ವಿವಿ ಉದ್ಯೋಗಿಗಳ ಸೇವಾ ನಡತೆ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಸಮಿತಿ ವರದಿ ನೀಡಿತ್ತು. ಆದರೆ ಮಂಗಳೂರು ವಿಶ್ವ ವಿದ್ಯಾನಿಲಯ ಜಯಶಂಕರ್ ಹಣ ನೀಡಿರುವುದು ದೃಢಪಟ್ಟರೂ ಪ್ರಾಧ್ಯಾಪಕ ಜಯಶಂಕರ್ ಗೆ ತಿಳುವಳಿಗೆ ಪತ್ರ ನೀಡಿ ಪ್ರಕರಣ ಇತ್ಯರ್ಥಗೊಳಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು