5:03 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಅಮರಾವತಿ: ಟ್ಯಾಂಕರ್ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವನೆ; 7 ಮಂದಿ ಕಾರ್ಮಿಕರು ದಾರುಣ ಸಾವು

09/02/2023, 21:23

ಕಾಕಿನಾಡ(reporterkarnataka.com): ಅಮರಾವತಿ ಜಿಲ್ಲೆಯ ಪೆದ್ದಾಪುರಂ ಮಂಡಲದ ಜಿ.ರಾಗಂಪೇಟೆಯಲ್ಲಿರುವ ಖಾದ್ಯ ತೈಲ ತಯಾರಿಕಾ ಕಂಪನಿಯೊಂದರ ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸುವ ವೇಳೆ ವಿಷಕಾರಿ ಅನಿಲವನ್ನು ಸೇವಿಸಿ 7 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡ ದಾರುಣ ಘಟನೆ ನಡೆದಿದೆ.

ಮೃತರನ್ನು ವೇಚಂಗಿ ಕೃಷ್ಣ, ವೆಚ್ಚಂಗಿ ನರಸಿಂಹಂ, ವೇಚಂಗಿ ಸಾಗರ್, ಕೊರತಾಡು ಬಂಜಿ ಬಾಬು, ಕರ್ರಿ ರಾಮರಾವ್, ಪ್ರಸಾದ್ ಮತ್ತು ಕಟ್ಟಮುರಿ ಜಗದೀಶ್ ಎಂದು ಗುರುತಿಸಲಾಗಿದೆ.

ಅಂಬಟಿ ಸುಬ್ಬಣ್ಣ ಎಣ್ಣೆ ಕಾರ್ಖಾನೆ ಆವರಣದಲ್ಲಿ ಈ ಘಟನೆ ನಡೆದಿದೆ. ಕಾರ್ಮಿಕರು 24 ಅಡಿ ಆಳದ ತೈಲ ಟ್ಯಾಂಕರ್ ಸ್ವಚ್ಛಗೊಳಿಸಲು ಒಬ್ಬೊಬ್ಬರಾಗಿ ಪ್ರವೇಶಿಸಿದ್ದು, ಅದರಲ್ಲಿದ್ದ ವಿಷಕಾರಿ ಅನಿಲವನ್ನು ಸೇವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ 5 ಮಂದಿ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಪಾಡೇರು ನಿವಾಸಿಗಳಾಗಿದ್ದು, ಇಬ್ಬರು ಅದೇ ಮಂಡಲದ ಪುಲಿಮೇರು ಗ್ರಾಮದವರು ಎಂದು ತಿಳಿದು ಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ರವೀಂದ್ರನಾಥ ಬಾಬು, ಜಿಲ್ಲಾಧಿಕಾರಿ ಕೃತಿಕಾ ಶುಕ್ಲಾ ಕೂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ತೈಲ ಕಾರ್ಖಾನೆಯ ಆಡಳಿತ ಮಂಡಳಿ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು