12:33 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಮಸ್ಕಿಯಲ್ಲಿ ಕಾಂಗ್ರೆಸ್ ನಿಂದ ಸೈಕಲ್ ತುಳಿದು ಭಾರಿ ಪ್ರತಿಭಟನೆ

09/07/2021, 07:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೇಂದ್ರ ಸರಕಾರ ತೈಲ ಬೆಲೆಯೇರಿಕೆ ಮಾಡಿರುವುದರ ವಿರುದ್ಧ ಮಸ್ಕಿ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಮತ್ತು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್ ಪಾಟೀಲ್ ಹನುಮೇಶ್ ಬಾಗೋಡಿ, ವೆಂಕಟ ರೆಡ್ಡಿ ಹಾಲಾಪುರ, ಮೃತ್ಯುಂಜಯ ಸ್ವಾಮಿ ಹಿರೇಮಠ, ಗೂಗೇಬಾಳ ಸೇರಿದಂತೆ ಇನ್ನಿತರ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿದರು.

ಇಂದಿನ ದಿನಗಳಲ್ಲಿ ಬಡವರು ಜೀವನ ಮಾಡು ಬಹಳ ಕಷ್ಟ. ಅಂತಹ ಸಮಯದಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಪ್ರತಿಯೊಂದಕ್ಕೂ ದರ ಏರಿಕೆ ಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಜೀವನಕ್ಕಾಗಿ ಇಂಧನ ದರವನ್ನು ಕಡಿತಗೊಳಿಸಿ ಬಡವರಿಗೆ ದಾರಿದೀಪವಾಗಬೇಕು. ಅದರಂತೆ ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ‌ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್. ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ದದ್ದಲ್ ಬಸನಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು ಕೃಷ್ಣ ಚಿಗರಿ ಹಾಗೂ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು