2:12 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆರೋಪ ಸತ್ಯಕ್ಕೆ ದೂರವಾದ ಮಾತು

09/07/2021, 07:57

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸಂಘದ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಘದ ಅಧ್ಯಕ್ಷ ತಿಮ್ಮಪ್ಪ ಹೇಳಿದರು.

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಸಂಘದ ವಿರುದ್ಧ ಕೆಲವರು ನ್ಯಾಯಬೆಲೆ ಅಂಗಡಿ ಗಳಿಗೆ ತೂಕದಲ್ಲಿ ವಂಚನೆ ಮಾಡುತ್ತಿದ್ದಾರೆ ಹಾಗೂ ಆಹಾರ ಪಡಿತರ ಆಹಾರ ಪಡಿತರ ವಿತರಣೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಿದ್ದು ಸರಿಯಲ್ಲ. ಸಂಘವು ಉನ್ನತ ಮಟ್ಟದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿದೆ ಎಂದವರು ತಿಳಿಸಿದರು.

ಸಂಘವು 1949 ರಲ್ಲಿ ಆರಂಭಗೊಂಡು ಅಂದಿನಿಂದ ಇಂದಿನವರೆಗೂ ಯಾವುದೇ ಲೋಪವಿಲ್ಲದೆ ಆಹಾರದ ವ್ಯವಸ್ಥೆಯನ್ನು ಮಾಡುತ್ತಿದೆ. ಕೆಲವರು ಸಂಘದ ಬಗ್ಗೆ ವಿತರಣೆಯನ್ನು ಬೇರೊಂದು ಸಂಸ್ಥೆಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲು ಒತ್ತಾಯಿಸಿರುವುದು  ಅವರ ಅನುಕೂಲಕ್ಕಾಗಿ ಹೊರತು ಬೇರೆ ಯಾವುದೇ ದೃಷ್ಟಿಯಿಂದ ಅಲ್ಲ . ಇದುವರೆಗೂ ನ್ಯಾಯಬೆಲೆ ಅಂಗಡಿಗಳಿಂದ ಯಾವುದೇ ದೂರು ಬಂದಿಲ್ಲ ಹಾಗೂ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಗಳು ಅಮಾನತುಗೊಂಡ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ಆಹಾರ ಇಲಾಖೆಯಿಂದ ವಿತರಣೆ ಮಾಡಲು ಅವಕಾಶ ಕೊಟ್ಟಿರುತ್ತಾರೆ.  ಈ ರೀತಿ ಸಂಘವು ಮುನ್ನಡೆಯುತ್ತಿದ್ದು ಇದರ ಬಗ್ಗೆ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದೆಂದು ಸಹಕಾರಿ ಮಹಾಮಂಡಳದ ನಿರ್ದೇಶಕರಾದ ರಾಜೇ ಗೌಡ ಹೇಳಿದರು.

ಸಂಘದ ನಿರ್ದೇಶಕರುಗಳಾದ ದಿನೇಶ್,  ಕೃಷ್ಣೇಗೌಡ ಹಾಲತಿಗಿರೀಶ್, ಗೋವಿಂದ , ರಾಚಯ್ಯ, ಚೇತನ್ ಚಿಕ್ಕಣ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು