3:24 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆರೋಪ ಸತ್ಯಕ್ಕೆ ದೂರವಾದ ಮಾತು

09/07/2021, 07:57

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸಂಘದ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಘದ ಅಧ್ಯಕ್ಷ ತಿಮ್ಮಪ್ಪ ಹೇಳಿದರು.

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಸಂಘದ ವಿರುದ್ಧ ಕೆಲವರು ನ್ಯಾಯಬೆಲೆ ಅಂಗಡಿ ಗಳಿಗೆ ತೂಕದಲ್ಲಿ ವಂಚನೆ ಮಾಡುತ್ತಿದ್ದಾರೆ ಹಾಗೂ ಆಹಾರ ಪಡಿತರ ಆಹಾರ ಪಡಿತರ ವಿತರಣೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಿದ್ದು ಸರಿಯಲ್ಲ. ಸಂಘವು ಉನ್ನತ ಮಟ್ಟದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿದೆ ಎಂದವರು ತಿಳಿಸಿದರು.

ಸಂಘವು 1949 ರಲ್ಲಿ ಆರಂಭಗೊಂಡು ಅಂದಿನಿಂದ ಇಂದಿನವರೆಗೂ ಯಾವುದೇ ಲೋಪವಿಲ್ಲದೆ ಆಹಾರದ ವ್ಯವಸ್ಥೆಯನ್ನು ಮಾಡುತ್ತಿದೆ. ಕೆಲವರು ಸಂಘದ ಬಗ್ಗೆ ವಿತರಣೆಯನ್ನು ಬೇರೊಂದು ಸಂಸ್ಥೆಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲು ಒತ್ತಾಯಿಸಿರುವುದು  ಅವರ ಅನುಕೂಲಕ್ಕಾಗಿ ಹೊರತು ಬೇರೆ ಯಾವುದೇ ದೃಷ್ಟಿಯಿಂದ ಅಲ್ಲ . ಇದುವರೆಗೂ ನ್ಯಾಯಬೆಲೆ ಅಂಗಡಿಗಳಿಂದ ಯಾವುದೇ ದೂರು ಬಂದಿಲ್ಲ ಹಾಗೂ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಗಳು ಅಮಾನತುಗೊಂಡ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ಆಹಾರ ಇಲಾಖೆಯಿಂದ ವಿತರಣೆ ಮಾಡಲು ಅವಕಾಶ ಕೊಟ್ಟಿರುತ್ತಾರೆ.  ಈ ರೀತಿ ಸಂಘವು ಮುನ್ನಡೆಯುತ್ತಿದ್ದು ಇದರ ಬಗ್ಗೆ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದೆಂದು ಸಹಕಾರಿ ಮಹಾಮಂಡಳದ ನಿರ್ದೇಶಕರಾದ ರಾಜೇ ಗೌಡ ಹೇಳಿದರು.

ಸಂಘದ ನಿರ್ದೇಶಕರುಗಳಾದ ದಿನೇಶ್,  ಕೃಷ್ಣೇಗೌಡ ಹಾಲತಿಗಿರೀಶ್, ಗೋವಿಂದ , ರಾಚಯ್ಯ, ಚೇತನ್ ಚಿಕ್ಕಣ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು