1:37 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆರೋಪ ಸತ್ಯಕ್ಕೆ ದೂರವಾದ ಮಾತು

09/07/2021, 07:57

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸಂಘದ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಘದ ಅಧ್ಯಕ್ಷ ತಿಮ್ಮಪ್ಪ ಹೇಳಿದರು.

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಸಂಘದ ವಿರುದ್ಧ ಕೆಲವರು ನ್ಯಾಯಬೆಲೆ ಅಂಗಡಿ ಗಳಿಗೆ ತೂಕದಲ್ಲಿ ವಂಚನೆ ಮಾಡುತ್ತಿದ್ದಾರೆ ಹಾಗೂ ಆಹಾರ ಪಡಿತರ ಆಹಾರ ಪಡಿತರ ವಿತರಣೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಿದ್ದು ಸರಿಯಲ್ಲ. ಸಂಘವು ಉನ್ನತ ಮಟ್ಟದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿದೆ ಎಂದವರು ತಿಳಿಸಿದರು.

ಸಂಘವು 1949 ರಲ್ಲಿ ಆರಂಭಗೊಂಡು ಅಂದಿನಿಂದ ಇಂದಿನವರೆಗೂ ಯಾವುದೇ ಲೋಪವಿಲ್ಲದೆ ಆಹಾರದ ವ್ಯವಸ್ಥೆಯನ್ನು ಮಾಡುತ್ತಿದೆ. ಕೆಲವರು ಸಂಘದ ಬಗ್ಗೆ ವಿತರಣೆಯನ್ನು ಬೇರೊಂದು ಸಂಸ್ಥೆಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲು ಒತ್ತಾಯಿಸಿರುವುದು  ಅವರ ಅನುಕೂಲಕ್ಕಾಗಿ ಹೊರತು ಬೇರೆ ಯಾವುದೇ ದೃಷ್ಟಿಯಿಂದ ಅಲ್ಲ . ಇದುವರೆಗೂ ನ್ಯಾಯಬೆಲೆ ಅಂಗಡಿಗಳಿಂದ ಯಾವುದೇ ದೂರು ಬಂದಿಲ್ಲ ಹಾಗೂ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಗಳು ಅಮಾನತುಗೊಂಡ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ಆಹಾರ ಇಲಾಖೆಯಿಂದ ವಿತರಣೆ ಮಾಡಲು ಅವಕಾಶ ಕೊಟ್ಟಿರುತ್ತಾರೆ.  ಈ ರೀತಿ ಸಂಘವು ಮುನ್ನಡೆಯುತ್ತಿದ್ದು ಇದರ ಬಗ್ಗೆ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದೆಂದು ಸಹಕಾರಿ ಮಹಾಮಂಡಳದ ನಿರ್ದೇಶಕರಾದ ರಾಜೇ ಗೌಡ ಹೇಳಿದರು.

ಸಂಘದ ನಿರ್ದೇಶಕರುಗಳಾದ ದಿನೇಶ್,  ಕೃಷ್ಣೇಗೌಡ ಹಾಲತಿಗಿರೀಶ್, ಗೋವಿಂದ , ರಾಚಯ್ಯ, ಚೇತನ್ ಚಿಕ್ಕಣ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು