2:05 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆರೋಪ ಸತ್ಯಕ್ಕೆ ದೂರವಾದ ಮಾತು

09/07/2021, 07:57

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಸಂಘದ ಮೇಲಿನ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಘದ ಅಧ್ಯಕ್ಷ ತಿಮ್ಮಪ್ಪ ಹೇಳಿದರು.

ನಾಗಮಂಗಲ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಸಂಘದ ವಿರುದ್ಧ ಕೆಲವರು ನ್ಯಾಯಬೆಲೆ ಅಂಗಡಿ ಗಳಿಗೆ ತೂಕದಲ್ಲಿ ವಂಚನೆ ಮಾಡುತ್ತಿದ್ದಾರೆ ಹಾಗೂ ಆಹಾರ ಪಡಿತರ ಆಹಾರ ಪಡಿತರ ವಿತರಣೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಿದ್ದು ಸರಿಯಲ್ಲ. ಸಂಘವು ಉನ್ನತ ಮಟ್ಟದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿದೆ ಎಂದವರು ತಿಳಿಸಿದರು.

ಸಂಘವು 1949 ರಲ್ಲಿ ಆರಂಭಗೊಂಡು ಅಂದಿನಿಂದ ಇಂದಿನವರೆಗೂ ಯಾವುದೇ ಲೋಪವಿಲ್ಲದೆ ಆಹಾರದ ವ್ಯವಸ್ಥೆಯನ್ನು ಮಾಡುತ್ತಿದೆ. ಕೆಲವರು ಸಂಘದ ಬಗ್ಗೆ ವಿತರಣೆಯನ್ನು ಬೇರೊಂದು ಸಂಸ್ಥೆಗೆ ಆಹಾರ ಪದಾರ್ಥಗಳನ್ನು ವಿತರಣೆ ಮಾಡಲು ಒತ್ತಾಯಿಸಿರುವುದು  ಅವರ ಅನುಕೂಲಕ್ಕಾಗಿ ಹೊರತು ಬೇರೆ ಯಾವುದೇ ದೃಷ್ಟಿಯಿಂದ ಅಲ್ಲ . ಇದುವರೆಗೂ ನ್ಯಾಯಬೆಲೆ ಅಂಗಡಿಗಳಿಂದ ಯಾವುದೇ ದೂರು ಬಂದಿಲ್ಲ ಹಾಗೂ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಗಳು ಅಮಾನತುಗೊಂಡ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲು ಆಹಾರ ಇಲಾಖೆಯಿಂದ ವಿತರಣೆ ಮಾಡಲು ಅವಕಾಶ ಕೊಟ್ಟಿರುತ್ತಾರೆ.  ಈ ರೀತಿ ಸಂಘವು ಮುನ್ನಡೆಯುತ್ತಿದ್ದು ಇದರ ಬಗ್ಗೆ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದೆಂದು ಸಹಕಾರಿ ಮಹಾಮಂಡಳದ ನಿರ್ದೇಶಕರಾದ ರಾಜೇ ಗೌಡ ಹೇಳಿದರು.

ಸಂಘದ ನಿರ್ದೇಶಕರುಗಳಾದ ದಿನೇಶ್,  ಕೃಷ್ಣೇಗೌಡ ಹಾಲತಿಗಿರೀಶ್, ಗೋವಿಂದ , ರಾಚಯ್ಯ, ಚೇತನ್ ಚಿಕ್ಕಣ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು