11:41 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಬೆಳ್ತಂಗಡಿಯ ಗಡಾಯಿಕಲ್ಲು ಏರಿ ಕನ್ನಡ ಧ್ವಜ ಹಾರಿಸಿದ ಕೋತಿರಾಜ್: ಮೆಟ್ಟಿಲುಗಳ ಸಹಾಯವಿಲ್ಲದೆ 1700 ಅಡಿಯೇರಿದ ಮಂಕಿಮ್ಯಾನ್!

12/02/2023, 23:29

ಬೆಳ್ತಂಗಡಿ(reporterkarnataka.com):
ಎತ್ತರದ ಕಟ್ಟಡ, ಐತಿಹಾಸಿಕ ಕೋಟೆ, ಪರ್ವತವನ್ನು ಸರಸರನೆ ಏರುವ ಜ್ಯೋತಿರಾಜ್ ಯಾನೆ ಕೋತಿರಾಜ್ ಅವರು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಸರಸರನೆ ಏರಿ ದಾಖಲೆ ನಿರ್ಮಿಸಿದ್ದಾರೆ.

ಕೋತಿ ರಾಜ್ ಅವರು ಭಾನುವಾರ 1700 ಅಡಿ ಎತ್ತರದ ಬೆಳ್ತಂಗಡಿಯ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಹತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. 2 ತಾಸಿನಲ್ಲಿ ಅವರು ಗಡಾಯಿಕಲ್ಲಿನ ತುತ್ತ ತುದಿಯನ್ನೇರಿದ್ದಾರೆ. ಅಷ್ಟೇ ಅಲ್ಲದೆ ಗಡಾಯಿಕಲ್ಲಿನ ಮೇಲೆ ಕನ್ನಡ ಧ್ವಜವನ್ನು ಹಾರಿಸಿದ್ದಾರೆ.


ಸಮುದ್ರ ಮಟ್ಟದಿಂದ 1700 ಅಡಿ ಎತ್ತರದಲ್ಲಿರುವ
ಗಡಾಯಿಕಲ್ಲನ್ನು ಮೊದಲ ಬಾರಿಗೆ ಕೋತಿರಾಜ್ ಏರಿದ್ದಾರೆ. ಏರುವ ಮುನ್ನ ಸಮೀಪ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ತೆಂಗಿನ ಕಾಯಿ ಒಡೆದಿದ್ದಾರೆ. 11.50 ರ ಸುಮಾರಿಗೆ ಗಡಾಯಿಕಲ್ಲು ತುತ್ತ ತುದಿ ಮುಟ್ಟುವಲ್ಲಿ ಅವರು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು