7:40 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಬಂಟ್ವಾಳ ತಾಲೂಕಿನಾದ್ಯಂತ ಕಮ್ಯುನಿಸ್ಟ್ ಚಳುವಳಿಯ ಪರಂಪರೆ ಮತ್ತೆ ಮರುಕಳಿಸಲಿದೆ: ಕೆ.ಯಾದವ ಶೆಟ್ಟಿ

13/02/2023, 00:39

ಬಂಟ್ವಾಳ(reporterlarnataka.com):
ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲಿ ರೈತ ಕಾರ್ಮಿಕರ ಹೋರಾಟ ಬಂಟ್ವಾಳದಲ್ಲಿ ಪ್ರಭಾವಶಾಲಿಯಾಗಿದ್ದು ದುಡಿಯುವ ವರ್ಗದ ಆಶಾ ಕಿರಣವಾಗಿ ಮೂಡಿಬಂದಿತ್ತು. ಬಳಿಕ ಭೂ ಸುಧಾರಣೆ ಕಾನೂನಿನ ಜಾರಿಗಾಗಿ ನಡೆದ ಸಮರಶೀಲ ಹೋರಾಟ ಬಂಟ್ವಾಳದಲ್ಲಿ ತನ್ನದೇ ಛಾಪನ್ನು ಮೂಡಿಸಿತು. ವಿವಿಧ ವಿಭಾಗದ ಕಾರ್ಮಿಕರಿಗೆ ನ್ಯಾಯ ಒದಗಿಸುವಲ್ಲಿಯೂ ಕಮ್ಯುನಿಸ್ಟರ ಪಾತ್ರವಿದೆ. ಒಟ್ಟಿನಲ್ಲಿ ಸಮಾಜದ ಅಭಿವೃದ್ಧಿಯಲ್ಲಿ ಕೆಂಬಾವುಟದ ಪಾತ್ರವಿದ್ದು,ಅಂತಹ ಕಮ್ಯುನಿಸ್ಟ್ ಚಳುವಳಿಯ ಪರಂಪರೆಯನ್ನು ಮತ್ತೆ ಮರುಕಳಿಸುವಂತಾಗಲು ದುಡಿಯುವ ವರ್ಗದ ಚಟುವಟಿಕೆಗಳು ಬಂಟ್ವಾಳ ತಾಲೂಕಿನಾದ್ಯಂತ ವಿಸ್ತಾರವಾಗಿ ಬೆಳೆಯಬೇಕು. ಅಂತಹ ಚಟುವಟಿಕೆಗಳಿಗೆ ಕೇಂದ್ರ ಸ್ಥಳವಾಗಿ ಸಿಪಿಎಂ ಕಚೇರಿ ಕಾರ್ಯ ನಿರ್ವಹಿಸಬೇಕು ಎಂದು ಸಿಪಿಎಂ ದ. ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಆಶಯ ವ್ಯಕ್ತಪಡಿಸಿದರು.
ಅವರು ಬಿ.ಸಿ. ರೋಡ್ ನಲ್ಲಿ ನೂತನ ಸಿಪಿಎಂ ಬಂಟ್ವಾಳ ತಾಲೂಕು ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ. ಬಾಲಕೃಷ್ಣ ಶೆಟ್ಟಿ ಹಾಗೂ ಸುಕುಮಾರ್ ಅವರು ಮಾತನಾಡಿ, ಜನಸಾಮಾನ್ಯರ ಬದುಕಿನ ಬಗ್ಗೆ ಸದಾ ಚಿಂತಿಸಿ ಜನಪರ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸಲು ದೇಶದ ಸೌಹಾರ್ದತಾ ಪರಂಪರೆಯನ್ನು ಉಳಿಸಲು ಶ್ರಮಿಸುತ್ತಿರುವ ಸಿಪಿಎಂ ಪಕ್ಷ ಮಾತ್ರವೇ ದೇಶಕ್ಕೆ ಭವಿಷ್ಯ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆ ವಹಿಸಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಡಾ. ಕೃಷ್ಣಪ್ಪ ಕೊಂಚಾಡಿ ಅವರು ಮಾತನಾಡುತ್ತಾ, ಸಮಸ್ತ ಮಾನವ ಕುಲದ ಏಳಿಗೆಗಾಗಿ ಶ್ರಮಿಸುವ ಕಮ್ಯುನಿಸ್ಟ್ ಸಿದ್ಧಾಂತದಿಂದ ಮಾತ್ರವೇ ಶೋಷಿತ ಸಮುದಾಯದ ದೀನ ದಲಿತರ ಉದ್ದಾರ ಮಾಡಲು ಸಾಧ್ಯ.ದೇಶದ ಆಳುವ ವರ್ಗ ಕೋಮುವಾದ ಕಾರ್ಪೊರೇಟ್ ಮಿಶ್ರಣದಿಂದ ದೇಶದ ಸಂಪತ್ತನ್ನು ದೋಚುತ್ತಿದೆ.ಅಂತಹ ವಂಚಕರಿಂದ ದೇಶವನ್ನು ಉಳಿಸಬೇಕಾದರೆ ಕಮ್ಯುನಿಸ್ಟ್ ಚಳುವಳಿಯನ್ನು ವಿಸ್ತಾರವಾಗಿ ಬೆಳೆಸುವುದು ಒಂದೇ ದಾರಿ ಎಂದು ಪ್ರತಿಪಾದಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಎಂಪಿ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕಾರ್ಮಿಕ ವರ್ಗದ ಧ್ವನಿಯಾದ ಸಿಪಿಎಂ ಬಂಟ್ವಾಳದಲ್ಲಿ ನಡೆಸಿದ ಹೋರಾಟಗಳನ್ನು ಮೆಲುಕು ಹಾಕುತ್ತಾ ಭವಿಷ್ಯದ ದಿನಗಳಲ್ಲಿ ಚಳುವಳಿ ಮುನ್ನಡೆಸಲು ಇರುವ ವಿಪುಲ ಅವಕಾಶಗಳ ಬಗ್ಗೆ ವಿವರಿಸಿದರು.


ವೇದಿಕೆಯಲ್ಲಿ ಸಿಪಿಎಂ ಹಿರಿಯ ನಾಯಕರಾದ ಬಿ ವಾಸು ಗಟ್ಟಿ, ಸಂಜೀವ ಬಂಗೇರ, ಮೋನಪ್ಪ ಸಪಲ್ಯ,ನಾರಾಯಣ ಬಡಕಬೈಲ್ ಉಪಸ್ಥಿತರಿದ್ದರು. ಜಿಲ್ಲೆಯ ಕಾರ್ಮಿಕ ಮುಖಂಡರಾದ ಬಿ ಎಂ ಭಟ್ ರವರು ಶುಭಕೋರಿ ಮಾತನಾಡಿದರು.
ಸಮಾರಂಭದಲ್ಲಿ ಸಿಪಿಎಂ ಹಿರಿಯ ನಾಯಕರಾದ ಸುಂದರ ಶೆಟ್ಟಿ ಮೂಡಬಿದ್ರಿ, ಸಿಪಿಎಂ ಬಂಟ್ವಾಳ ತಾಲೂಕು ನಾಯಕರಾದ ಉದಯ ಕುಮಾರ್,ಜನಾರ್ಧನ, ಲೋಲಾಕ್ಷಿ,ಚಂದ್ರ ಪೂಜಾರಿ, ಯುವಜನ ನಾಯಕರಾದ ಅಮೀರ್,ಅಮನ್ ,ಕಾರ್ಮಿಕ ನಾಯಕರಾದ ವಿಮಲ, ನಾರಾಯಣ ಮುಂತಾದವರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು