12:32 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು