2:41 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು