5:30 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಉಪ್ಪೂರಿನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ; ಅರ್ಧ ತಾಸು ಟ್ರಾಫಿಕ್ ಜಾಮ್

13/02/2023, 13:16

ಉಡುಪಿ(reporterkarnataka.com): ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ‌ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನು‌ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡ ಲಾರಿ ಚಾಲಕನನ್ನು ಕುಮಟದ ಕದಗಲ್ ಮೂಲದ ಮಹೇಶ್ ಗೌಡ ಹಾಗೂ ಬೈಕ್ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ.

ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ‌ಹೊಡೆದು, ರಸ್ತೆ ಬದಿಯ ದಾರಿದೀಪದ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಹಾಗೂ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಉಪ್ಪೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸುಕ್ಕಿಂತಲೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು