3:22 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಲೆನಾಡಿನ ರಸ್ತೆ ದುಸ್ಥಿತಿ; ಪಂಚರ್ ಆದ ಆ್ಯಂಬ್ಯುಲೆನ್ಸ್ ನಲ್ಲಿ ನರಳಾಡಿದ ತುಂಬು ಗರ್ಭಿಣಿ

13/02/2023, 18:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡ ರಸ್ತೆ ದುಸ್ಥಿತಿಗೆ ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ನಡು ರಸ್ತೆಯಲ್ಲೇ ನರಳಾಡಿದ ದಾರುಣ ಘಟನೆ ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.

ಗರ್ಭಿಣಿ ಮಹಿಳೆಯನ್ನು ಕೊಂಡೊಯ್ಯುತ್ತಿದ್ದ ಆ್ಯಂಬ್ಯುಲೆನ್ಸ್ ರಸ್ತೆ ಗುಂಡಿಗೆ ಪಂಚರ್ ಆಗಿ ನಡು ರಸ್ತೆಯಲ್ಲೇ ಕೆಟ್ಟು ನಿಂತಿತು. ಅಂಬ್ಯುಲೆನ್ಸ್ ನಲ್ಲಿ ಇದ್ದ ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ನರಳಾಡಲಾರಂಭಿಸಿದರು. ಮಲೆನಾಡ ರಸ್ತೆ ದುಸ್ಥಿತಿಗೆ ಪ್ರಾಣಾಪಾಯದ ಸ್ಥಿತಿಗೆ ಮಹಿಳೆ ತಲುಪಿದ್ದರು. ನಡು ರಸ್ತೆಯಲ್ಲಿ ಪಂಚರ್ ಜೊತೆಗೆ ಇಂಜಿನ್ ನ ದೋಷದಿಂದ ಕೆಟ್ಟು ಆಂಬುಲೆನ್ಸ್ ನಿಂತಿತು. ನಂತರ ಬೇರೊಂದು ವಾಹನದಲ್ಲಿ ಗರ್ಭಿಣಿಯನ್ನ ಕೊಪ್ಪಕ್ಕೆ ಕಳುಹಿಸಲಾಗಿದೆ ಮಾಗುಂಡಿ ಮೂಲದ ಶರಣ್ಯ ಎನ್ನುವ ಮಹಿಳೆಯನ್ನು ಕೊಪ್ಪ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಕಳಸ ಟು ಬಾಳೆಹೊನ್ನೂರು ಮಾರ್ಗದ ಹಳುವಳ್ಳಿಯಲ್ಲಿ ಆಂಬುಲೆನ್ಸ್ ನಿಂತಿತು. ಕೊಪ್ಪ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಮಹಿಳೆ ಶರಣ್ಯಜನ್ಮ ನೀಡಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ
ರಸ್ತೆಗಳು ಗುಂಡಿಮಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು