5:45 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಲೆನಾಡಿನ ರಸ್ತೆ ದುಸ್ಥಿತಿ; ಪಂಚರ್ ಆದ ಆ್ಯಂಬ್ಯುಲೆನ್ಸ್ ನಲ್ಲಿ ನರಳಾಡಿದ ತುಂಬು ಗರ್ಭಿಣಿ

13/02/2023, 18:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡ ರಸ್ತೆ ದುಸ್ಥಿತಿಗೆ ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ನೋವಿನಿಂದ ನಡು ರಸ್ತೆಯಲ್ಲೇ ನರಳಾಡಿದ ದಾರುಣ ಘಟನೆ ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ನಡೆದಿದೆ.

ಗರ್ಭಿಣಿ ಮಹಿಳೆಯನ್ನು ಕೊಂಡೊಯ್ಯುತ್ತಿದ್ದ ಆ್ಯಂಬ್ಯುಲೆನ್ಸ್ ರಸ್ತೆ ಗುಂಡಿಗೆ ಪಂಚರ್ ಆಗಿ ನಡು ರಸ್ತೆಯಲ್ಲೇ ಕೆಟ್ಟು ನಿಂತಿತು. ಅಂಬ್ಯುಲೆನ್ಸ್ ನಲ್ಲಿ ಇದ್ದ ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ನರಳಾಡಲಾರಂಭಿಸಿದರು. ಮಲೆನಾಡ ರಸ್ತೆ ದುಸ್ಥಿತಿಗೆ ಪ್ರಾಣಾಪಾಯದ ಸ್ಥಿತಿಗೆ ಮಹಿಳೆ ತಲುಪಿದ್ದರು. ನಡು ರಸ್ತೆಯಲ್ಲಿ ಪಂಚರ್ ಜೊತೆಗೆ ಇಂಜಿನ್ ನ ದೋಷದಿಂದ ಕೆಟ್ಟು ಆಂಬುಲೆನ್ಸ್ ನಿಂತಿತು. ನಂತರ ಬೇರೊಂದು ವಾಹನದಲ್ಲಿ ಗರ್ಭಿಣಿಯನ್ನ ಕೊಪ್ಪಕ್ಕೆ ಕಳುಹಿಸಲಾಗಿದೆ ಮಾಗುಂಡಿ ಮೂಲದ ಶರಣ್ಯ ಎನ್ನುವ ಮಹಿಳೆಯನ್ನು ಕೊಪ್ಪ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಕಳಸ ಟು ಬಾಳೆಹೊನ್ನೂರು ಮಾರ್ಗದ ಹಳುವಳ್ಳಿಯಲ್ಲಿ ಆಂಬುಲೆನ್ಸ್ ನಿಂತಿತು. ಕೊಪ್ಪ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಮಹಿಳೆ ಶರಣ್ಯಜನ್ಮ ನೀಡಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ
ರಸ್ತೆಗಳು ಗುಂಡಿಮಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು