11:22 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮಂಗಳೂರು: ಸ್ಟೇಟ್ ಬ್ಯಾಂಕ್ ನಲ್ಲಿ ಸೇವಾ ಕೇಂದ್ರ ಕರ್ನಾಟಕ ಒನ್ ಉದ್ಘಾಟನೆ

13/02/2023, 19:29

ಮಂಗಳೂರು(reporterkarnataka.com): ನಗರದ ಸ್ಟೇಟ್ ಬ್ಯಾಂಕ್ ನಲ್ಲಿ ಪ್ರೀತೆಶ್ ಅವರ ನೇತೃತ್ವದ ಸರಕಾರದ ಸೇವಾ ಕೇಂದ್ರವಾದ ಕರ್ನಾಟಕ ಒನ್ ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಇಸ್ಕಾನ್ ನ ಜಿಲ್ಲಾ ಕಾರ್ಯದರ್ಶಿ ಸನ್ನನಂದನ ದಾಸ್ ಅವರು ನೆರವೇರಿಸಿ ಪ್ರೀತೇಶ್ ರವರ ಸಮಾಜ ಮುಖಿ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಈ ಸಂಸ್ಥೆಯ ಮುಖಾಂತರ ಇನ್ನಷ್ಟು ಸೇವೆಯನ್ನು ನೀಡುವ0ಂತೆ ಆಗಲಿ ಎಂದು ಹಾರೈಸಿದರು.


ಶಾಸಕ ವೇದವ್ಯಾಸ್ ಕಾಮತ್ ಅವರು ಶುಭ ಹಾರೈಸಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಐವನ್ ಡಿಸೋಜ ಅವರು ಮಾತನಾಡಿ ಒಳ್ಳೆಯ ಸೇವೆ ಜನರಿಗೆ ಸಿಗುವಂತಾಗಲಿ ಎಂದು ಹಾರೈಸಿದರು. ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ನವೀನ್ ಡಿಸೊಜ ಅವರು ಮಾತನಾಡಿ, ಪ್ರೀತೆಶ್ ರವರು ಕರ್ನಾಟಕ ಒನ್ ಆರಂಭಿಸುವ ಮೊದಲಿನಿಂದಲೂ ಜನಸೇವೆ ಮಾಡುತ್ತಾ ಜನ ಸಾಮಾನ್ಯರಿಗೆ ಚಿರಪರಿಚಿತರಾಗಿರುವುದಾಗಿ ತಿಳಿಸಿ ಮಹಾನಗರ ಪಾಲಿಕೆಯ ಎಲ್ಲಾ ಸೇವೆಗಳು ಈ ಸೇವಾ ಕೇಂದ್ರ ದಲ್ಲಿ ದೊರೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯ ಬೇಕು ಎಂದು ಆಶಿಸಿದರು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊಶಾದಿಕಾರಿ ಪದ್ಮರಾಜ್ ಆರ್. ಅವರು ತನ್ನ ಸಣ್ಣ ವಯಸ್ಸಿನಲ್ಲೇ ಸಮಾಜ ಸೇವೆಯಲ್ಲಿ ತೊಡಗಿಕೊಂದಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಯುವ ಜನರು ದಾರಿ ತಪ್ಪುವ ವಯಸಿನಲ್ಲೆ ಸಮಾಜ ಸೇವೆ ಯಲ್ಲಿ ತೊಡಗಿ ಯುವಕರಿಗೆ ಮಾದರಿ ವ್ಯಕ್ತಿಯಾಗಿರುವುದಾಗಿ ಹಾಗೂ ಇನ್ನಷ್ಟು ಸೇವೆ ಮಾಡಲು ದೇವರು ಸಹಕರಿಸಲಿ ಎಂದು ಹಾರೈಸಿದರು.
ವೇದಿಕೆ ಯಲ್ಲಿ ಶಂಶುದೀನ್ ಕುದ್ರೋಳಿ, ಇಜ಼್ಜಾ ಬಜಾಲ್, ಪ್ರಭಾಕರ್ ಮತ್ತು ಮಾಲತಿ ಉಪಸ್ಥಿತರಿದ್ದರು. ನ್ಯಾಯವಾದಿ ರಘುನಾಥ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು