1:17 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಂಗಳೂರು: ಸ್ಟೇಟ್ ಬ್ಯಾಂಕ್ ನಲ್ಲಿ ಸೇವಾ ಕೇಂದ್ರ ಕರ್ನಾಟಕ ಒನ್ ಉದ್ಘಾಟನೆ

13/02/2023, 19:29

ಮಂಗಳೂರು(reporterkarnataka.com): ನಗರದ ಸ್ಟೇಟ್ ಬ್ಯಾಂಕ್ ನಲ್ಲಿ ಪ್ರೀತೆಶ್ ಅವರ ನೇತೃತ್ವದ ಸರಕಾರದ ಸೇವಾ ಕೇಂದ್ರವಾದ ಕರ್ನಾಟಕ ಒನ್ ನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಇಸ್ಕಾನ್ ನ ಜಿಲ್ಲಾ ಕಾರ್ಯದರ್ಶಿ ಸನ್ನನಂದನ ದಾಸ್ ಅವರು ನೆರವೇರಿಸಿ ಪ್ರೀತೇಶ್ ರವರ ಸಮಾಜ ಮುಖಿ ಕಾರ್ಯವನ್ನು ಶ್ಲಾಘಿಸಿದರು ಹಾಗೂ ಈ ಸಂಸ್ಥೆಯ ಮುಖಾಂತರ ಇನ್ನಷ್ಟು ಸೇವೆಯನ್ನು ನೀಡುವ0ಂತೆ ಆಗಲಿ ಎಂದು ಹಾರೈಸಿದರು.


ಶಾಸಕ ವೇದವ್ಯಾಸ್ ಕಾಮತ್ ಅವರು ಶುಭ ಹಾರೈಸಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಐವನ್ ಡಿಸೋಜ ಅವರು ಮಾತನಾಡಿ ಒಳ್ಳೆಯ ಸೇವೆ ಜನರಿಗೆ ಸಿಗುವಂತಾಗಲಿ ಎಂದು ಹಾರೈಸಿದರು. ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ನವೀನ್ ಡಿಸೊಜ ಅವರು ಮಾತನಾಡಿ, ಪ್ರೀತೆಶ್ ರವರು ಕರ್ನಾಟಕ ಒನ್ ಆರಂಭಿಸುವ ಮೊದಲಿನಿಂದಲೂ ಜನಸೇವೆ ಮಾಡುತ್ತಾ ಜನ ಸಾಮಾನ್ಯರಿಗೆ ಚಿರಪರಿಚಿತರಾಗಿರುವುದಾಗಿ ತಿಳಿಸಿ ಮಹಾನಗರ ಪಾಲಿಕೆಯ ಎಲ್ಲಾ ಸೇವೆಗಳು ಈ ಸೇವಾ ಕೇಂದ್ರ ದಲ್ಲಿ ದೊರೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯ ಬೇಕು ಎಂದು ಆಶಿಸಿದರು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೊಶಾದಿಕಾರಿ ಪದ್ಮರಾಜ್ ಆರ್. ಅವರು ತನ್ನ ಸಣ್ಣ ವಯಸ್ಸಿನಲ್ಲೇ ಸಮಾಜ ಸೇವೆಯಲ್ಲಿ ತೊಡಗಿಕೊಂದಿರುವ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಯುವ ಜನರು ದಾರಿ ತಪ್ಪುವ ವಯಸಿನಲ್ಲೆ ಸಮಾಜ ಸೇವೆ ಯಲ್ಲಿ ತೊಡಗಿ ಯುವಕರಿಗೆ ಮಾದರಿ ವ್ಯಕ್ತಿಯಾಗಿರುವುದಾಗಿ ಹಾಗೂ ಇನ್ನಷ್ಟು ಸೇವೆ ಮಾಡಲು ದೇವರು ಸಹಕರಿಸಲಿ ಎಂದು ಹಾರೈಸಿದರು.
ವೇದಿಕೆ ಯಲ್ಲಿ ಶಂಶುದೀನ್ ಕುದ್ರೋಳಿ, ಇಜ಼್ಜಾ ಬಜಾಲ್, ಪ್ರಭಾಕರ್ ಮತ್ತು ಮಾಲತಿ ಉಪಸ್ಥಿತರಿದ್ದರು. ನ್ಯಾಯವಾದಿ ರಘುನಾಥ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು