3:34 AM Thursday16 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ʼThe Idea of Bharath’: ಫೆಬ್ರವರಿ 18 ಮತ್ತು 19ರಂದು ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ

14/02/2023, 21:35

ಮಂಗಳೂರು(reporterkarnataka.com): ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿಯು ʼThe Idea of Bharath’ ಎಂಬ ಥೀಮ್‌ನಡಿಯಲ್ಲಿ ಫೆಬ್ರವರಿ 18 ಮತ್ತು 19 ರಂದು ಎರಡು ದಿನಗಳ ಕಾಲ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಜರುಗಲಿದೆ.

ಒಟ್ಟು 25 ಸೆಷನ್‌ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55 ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಲಿಟ್‌ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ಜರುಗಲಿದೆ. ಅಲ್ಲದೇ 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ತುಕಾರಾಮ್ ಪೂಜಾರಿ ಅವರಿಗೆ ಈ ಬಾರಿಯ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಅವಧಿ, ಲೇಖಕರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ.

ಉದ್ಘಾಟನಾ ಅವಧಿ ʼThe Idea of Bharath In Amrithkal: Reclaiming The Right Path-The Way Forward ಪರಿಕಲ್ಪನೆಯ ಅಡಿ ಜರುಗಲಿದ್ದು, ಆರ್‌. ಜಗ್ನನಾಥ್‌, ವಿನಯ್‌ ಹೆಗ್ಡೆ, ವಿ. ನಾಗರಾಜ್‌ ಅವರು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು