11:49 PM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್ ಅಧಿವೇಶನದಲ್ಲಿ ಶಾಸಕ ಡಾ. ಮಂಜುನಾಥ ಭಂಡಾರಿ ಆಗ್ರಹ

14/02/2023, 21:55

ಬೆಂಗಳೂರು(reporterkarnataka.com): ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ ಇದು ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡಿದೆ. ಬೈಂದೂರಿನಿಂದ ಬ್ರಹ್ಮಾವರದವರೆಗೆ, ಇತ್ತ ಬಸ್ರೂರಿನಿಂದ ಹೆಬ್ರಿ ತನಕ ಮಲೆನಾಡು, ಕರಾವಳಿ 300 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಂದ ಕನ್ನಡ ಭಾಷೆಯಲ್ಲೇ ಸ್ಪಷ್ಟವಾಗಿ ಮಾತನಾಡುವ 25 ಲಕ್ಷಕ್ಕೂ ಹೆಚ್ಚು ಜನರಿದ್ದು, ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ ಅಗತ್ಯವಿದೆ ಎಂದು
ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಒತ್ತಾಯಿಸಿದರು.

ಅವರು ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಸರಕಾರದ ಗಮನ ಸೆಳೆದರು.ಕುಂದಾಪುರವು ರಾಜ್ಯ, ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಬುತ ಕೊಡುಗೆ ನೀಡಿದ ಊರು.
ಜನರ ಆಟ ಪಾಠಗಳಲ್ಲಿ, ಕೃಷಿ, ಮೀನುಗಾರಿಕೆ ಚಟುವಟಿಕೆಗಳಲ್ಲಿ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಕಂಬಳ, ಕೋಲ, ಹೋಳಿ ಆಚರಣೆಗಳಲ್ಲಿ ಕುಂದಾಪ್ರ ಕನ್ನಡ ಭಾಷೆ ಸೊಬಗು ಕಾಣಸಿಗುತ್ತದೆ. ತಾಲ್ಲೂಕು ಬದಲಾದಾಗ ಕುಲಕಸಬುಗಳಿಗೆ ಅನುಗುಣವಾಗಿ ಕೆಲವು ಶಬ್ದಗಳು ಬದಲಾದರೂ ಕುಂದ ಕನ್ನಡ ಸಮೃದ್ಧಿ ಕಾಣುತ್ತದೆ ಎಂದು ಅವರು ಬಣ್ಣಿಸಿದರು.

ಒಂದು ಶತಮಾನದಲ್ಲಿ ಕುಂದ ಕನ್ನಡ ಭಾಷೆಯ ಬಳಕೆಗಳ ಸ್ಪಷ್ಟ ದಾಖಲೆ ಸಿಗುತ್ತದೆ. ತಮ್ಮ ಸಾಹಿತ್ಯದಲ್ಲಿ, ಪಾತ್ರಗಳ ಆಡು ಮಾತಿನಲ್ಲಿ, ಕುಂದಾಪ್ರ ಕನ್ನಡವನ್ನೇ ಬಳಕೆ ಮಾಡಿ ವೈದೇಹಿ, ಮಿತ್ರಾ ವೆಂಕಟರಾಜ್, ಗಾಯತ್ರಿ ನಾವಡ, ಮಾಧುರಿಕೃಷ್ಣ, ವರಮಹಾಲಕ್ಷ್ಮೀ ಹೊಳ್ಳ ಮುಂತಾದವರು ಯಶಸ್ವಿಯಾಗಿದ್ದಾರೆ ಎಂದು ಡಾ. ಭಂಡಾರಿ ಸದನದ ಗಮನ ಸೆಳೆದರು.
ರಾಜ್ಯದಲ್ಲಿ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತ ಭಾಷೆಗಳಿಗೇ ಅಕಾಡೆಮಿಗಳು ರಚನೆಯಾಗಿರುವಾಗ, ಬಹು ಸಮುದಾಯದ ವಿಸ್ತಾರವಾದ ಪ್ರದೇಶದಲ್ಲಿ ವ್ಯಾಪಿಸಿರುವ 25 ಲಕ್ಷಕ್ಕೂ ಹೆಚ್ಚು ಜನರ ಹೃದಯ ಭಾಷೆಯಾದ ಕುಂದಾಪುರ ಕನ್ನಡಕ್ಕೆ ಜನರು ಹೋರಾಟಕ್ಕೆ ಇಳಿಯುವ ಮೊದಲೇ ಅಕಾಡೆ‌ಮಿ ಸ್ಥಾಪಿಸುವ ಅನಿವಾರ್ಯತೆ ಇದೆ. ಆದ್ದರಿಂದ 25 ಲಕ್ಷ ಜನರ ಆಶಯದಂತೆ ‘ಕುಂದಾಪುರ ಕನ್ನಡ ಭಾಷಾ ಅಕಾಡಮಿ’ ಸ್ಥಾಪಿಸಬೇಕೆಂದು ಸರಕಾರವನ್ನು ಒತ್ತಾಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು