2:42 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್ ಅಧಿವೇಶನದಲ್ಲಿ ಶಾಸಕ ಡಾ. ಮಂಜುನಾಥ ಭಂಡಾರಿ ಆಗ್ರಹ

14/02/2023, 21:55

ಬೆಂಗಳೂರು(reporterkarnataka.com): ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ ಇದು ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡಿದೆ. ಬೈಂದೂರಿನಿಂದ ಬ್ರಹ್ಮಾವರದವರೆಗೆ, ಇತ್ತ ಬಸ್ರೂರಿನಿಂದ ಹೆಬ್ರಿ ತನಕ ಮಲೆನಾಡು, ಕರಾವಳಿ 300 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಂದ ಕನ್ನಡ ಭಾಷೆಯಲ್ಲೇ ಸ್ಪಷ್ಟವಾಗಿ ಮಾತನಾಡುವ 25 ಲಕ್ಷಕ್ಕೂ ಹೆಚ್ಚು ಜನರಿದ್ದು, ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ ಅಗತ್ಯವಿದೆ ಎಂದು
ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಒತ್ತಾಯಿಸಿದರು.

ಅವರು ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಸರಕಾರದ ಗಮನ ಸೆಳೆದರು.ಕುಂದಾಪುರವು ರಾಜ್ಯ, ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಬುತ ಕೊಡುಗೆ ನೀಡಿದ ಊರು.
ಜನರ ಆಟ ಪಾಠಗಳಲ್ಲಿ, ಕೃಷಿ, ಮೀನುಗಾರಿಕೆ ಚಟುವಟಿಕೆಗಳಲ್ಲಿ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಕಂಬಳ, ಕೋಲ, ಹೋಳಿ ಆಚರಣೆಗಳಲ್ಲಿ ಕುಂದಾಪ್ರ ಕನ್ನಡ ಭಾಷೆ ಸೊಬಗು ಕಾಣಸಿಗುತ್ತದೆ. ತಾಲ್ಲೂಕು ಬದಲಾದಾಗ ಕುಲಕಸಬುಗಳಿಗೆ ಅನುಗುಣವಾಗಿ ಕೆಲವು ಶಬ್ದಗಳು ಬದಲಾದರೂ ಕುಂದ ಕನ್ನಡ ಸಮೃದ್ಧಿ ಕಾಣುತ್ತದೆ ಎಂದು ಅವರು ಬಣ್ಣಿಸಿದರು.

ಒಂದು ಶತಮಾನದಲ್ಲಿ ಕುಂದ ಕನ್ನಡ ಭಾಷೆಯ ಬಳಕೆಗಳ ಸ್ಪಷ್ಟ ದಾಖಲೆ ಸಿಗುತ್ತದೆ. ತಮ್ಮ ಸಾಹಿತ್ಯದಲ್ಲಿ, ಪಾತ್ರಗಳ ಆಡು ಮಾತಿನಲ್ಲಿ, ಕುಂದಾಪ್ರ ಕನ್ನಡವನ್ನೇ ಬಳಕೆ ಮಾಡಿ ವೈದೇಹಿ, ಮಿತ್ರಾ ವೆಂಕಟರಾಜ್, ಗಾಯತ್ರಿ ನಾವಡ, ಮಾಧುರಿಕೃಷ್ಣ, ವರಮಹಾಲಕ್ಷ್ಮೀ ಹೊಳ್ಳ ಮುಂತಾದವರು ಯಶಸ್ವಿಯಾಗಿದ್ದಾರೆ ಎಂದು ಡಾ. ಭಂಡಾರಿ ಸದನದ ಗಮನ ಸೆಳೆದರು.
ರಾಜ್ಯದಲ್ಲಿ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತ ಭಾಷೆಗಳಿಗೇ ಅಕಾಡೆಮಿಗಳು ರಚನೆಯಾಗಿರುವಾಗ, ಬಹು ಸಮುದಾಯದ ವಿಸ್ತಾರವಾದ ಪ್ರದೇಶದಲ್ಲಿ ವ್ಯಾಪಿಸಿರುವ 25 ಲಕ್ಷಕ್ಕೂ ಹೆಚ್ಚು ಜನರ ಹೃದಯ ಭಾಷೆಯಾದ ಕುಂದಾಪುರ ಕನ್ನಡಕ್ಕೆ ಜನರು ಹೋರಾಟಕ್ಕೆ ಇಳಿಯುವ ಮೊದಲೇ ಅಕಾಡೆ‌ಮಿ ಸ್ಥಾಪಿಸುವ ಅನಿವಾರ್ಯತೆ ಇದೆ. ಆದ್ದರಿಂದ 25 ಲಕ್ಷ ಜನರ ಆಶಯದಂತೆ ‘ಕುಂದಾಪುರ ಕನ್ನಡ ಭಾಷಾ ಅಕಾಡಮಿ’ ಸ್ಥಾಪಿಸಬೇಕೆಂದು ಸರಕಾರವನ್ನು ಒತ್ತಾಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು