6:57 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ನೀರುಮಾರ್ಗ: ಕಾಂಗ್ರೆಸ್ ನಿಂದ ಸಾರ್ವಜನಿಕ ಸೇವೆಗೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ

09/07/2021, 16:33

ಸುರತ್ಕಲ್ (reporterkarnataka news): ನೀರುಮಾರ್ಗ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ನೀರುಮಾರ್ಗ ಜಂಕ್ಷನ್ ಬಳಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಭೇದವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಜನಸೇವೆಯನ್ನು ಮಾಡುತ್ತಿವೆ. 

 ಜನಸೇವೆ ಮಾಡಲು ಅಧಿಕಾರವಿರಬೇಕೆಂದಿಲ್ಲ. ಮಾನವೀಯ ಗುಣ ಮುಖ್ಯವಾಗುತ್ತದೆ. ಈ ಭಾಗದ ಪುಟ್ಟ ಬಾಲಕಿ ಕ್ಲಾವಿಯ ಅಗ್ನೇಲ್ ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದು ಅವಳ ಹೆತ್ತವರ ಆಸೆಯಂತೆ ಇಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ನೀರುಮಾರ್ಗದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಜನರಿಗೆ ನೆರವು ನೀಡುವ ಉದ್ದೇಶದಿಂದ ತಿಂಗಳ ಹಿಂದೆ ಆಂಬುಲೆನ್ಸ್ ಸೇವೆ ಪ್ರಾರಂಭ ಮಾಡಿದ್ದೆವು. ಬಡವರ್ಗದ ಜನರು ತುರ್ತು ಸಂದರ್ಭದಲ್ಲಿ ಸಮಸ್ಯೆ ಎದುರಿಸಬಾರದು ಎಂಬ ದೃಷ್ಟಿಯಿಂದ ಈ ಸೇವೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಅಧಿಕಾರ ಇದ್ದಾಗ ಮಾತ್ರ ಜನರ ಜೊತೆಯಿದ್ದರೆ ಸಾಲದು. ಅಧಿಕಾರವಿಲ್ಲದಿದ್ದರೂ ಜನರ ಜೊತೆ ನಿಲ್ಲಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇವಲ ರಾಜಕಾರಣ ಮಾಡದೇ ಅನೇಕ ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ 20 ಕಡೆಗಳಲ್ಲಿ ರಕ್ತದಾನ ಮಾಡಿ 2500 ಯುನಿಟ್ ರಕ್ತ ಸಂಗ್ರಹ ಮಾಡಿದ್ದಲ್ಲದೆ ಆಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಜನರಿಗೆ ನೆರವಾಗಿದೆ. ತುರ್ತು ಸೇವೆಗೆ ಆಂಬುಲೆನ್ಸ್ ಗೆ ಕೈಜೋಡಿಸಿದ ಎಲ್ಲರ ಕಾರ್ಯ ಶ್ಲಾಘನೀಯವೆಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗುರುಪುರ ವಲಯ ಅಧ್ಯಕ್ಷ ಸುರೇಂದ್ರ ಕಾಂಬ್ಳಿ ಧರ್ಮ ಗುರು ಫಾ. ಜೋಸೆಫ್ ಮಸ್ಕರೇನಸ್, ಧರ್ಮಗುರು‌ ಜಿ ಐ ಎಸ್ ಇಸ್ಮಾಯಿಲ್, ಸಮಾಜ ಸೇವಕ ಎಮ್ ಪ್ರೇಮಚಂದ್ರ ಭಟ್, ನೀರುಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಧನವಂತಿ, ನೀರುಮಾರ್ಗ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ‌ ಯಶೋಧ ಜೆ ಸಾಲ್ಯಾ‌ನ್ ಉಪಸ್ಥಿತರಿದ್ದರು.

ಶ್ರೀಧರ್ ಸ್ವಾಗತಿಸಿದರು. ಸಂತೋಷ್ ಡಿ ಪಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು