2:39 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಸಾಲ ಮನ್ನಾ ಘೋಷಿಸದ ಬೊಮ್ಮಾಯಿ ಬಜೆಟ್ ರೈತ ವಿರೋಧಿ: ರೈತ ಮುಖಂಡ ಮಹಾದೇವ ಮಡಿವಾಳ ಆಕ್ರೋಶ

18/02/2023, 15:07

ರಾಹುಲ್ ಅಥಣಿ ಬೆಳಗಾಗಾವಿ

info.reporterkarnataka@gmail.ಕಾಂ

ರೈತರ ಸಾಲ ಮನ್ನಾ ಮಾಡುತ್ತದೆ ಎಂದು ಬಿಜೆಪಿ ಸರ್ಕಾರದ ಮೇಲೆ ಬಹು ನಿರೀಕ್ಷೆ ಇತ್ತು. ಆದರೆ ಈ ಬಜೆಟ್ ನಲ್ಲಿ ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ. ಇದೊಂದು ರೈತ ವಿರೋಧಿ ಬಜೆಟ್ ಎಂದು ರೈತ ಮುಖಂಡ ಮಹಾದೇವ ಮಡಿವಾಳ ಬೊಮ್ಮಾಯಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಒಳಿತು ಮಾಡುತ್ತೇನೆ ಎಂದು ಹೇಳಿದ ಸರ್ಕಾರ ರೈತ ವಿರೋಧಿ ನೀತಿಗಳನ್ನು ತಂದಿರುವುದಲ್ಲದೆ ಈ ವರ್ಷದ ಬಜೆಟ್ ನಲ್ಲಿ ರೈತರಿಗೆ ಉಪಯೋಗವಾಗದ ಯೋಜನೆಯನ್ನು ಘೋಷಿಸಿ ರೈತ ಕುಲಕ್ಕೆ ಅನ್ಯಾಯ ಮಾಡಿದೆ ಎಂದು ಅವರು ಹೇಳಿದರು.

ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ರೂ ಕೊಡುತ್ತೇನೆ ಎಂಬುದು ಹೇಳಲು ಮಾತ್ರ ಚೆಂದ ಕೆಲವೊಂದು ಬ್ಯಾಂಕುಗಳು ರೈತರ ಒಂದು ಎಕರೆ ಹೊಲಕ್ಕೆ ಕೇವಲ 20 ಸಾವಿರಗಳನ್ನು ಮಾತ್ರ ಕೊಡುತ್ತದೆ. ಆದರೆ ಬೊಮ್ಮಾಯಿ ಅವರು ಹೇಳುತ್ತಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

ಹಿಂದೆ ಇದ್ದ ಸರ್ಕಾರ ಕೃಷಿ ಹೊಂಡಗಳಿಗೆ ಸುಮಾರು 100 ದಿನಗಳವರೆಗೆ ಕೆಲಸ ಕೊಡುತ್ತಿತ್ತು. ಆದರೆ ಇಂದು ಈ ಸರ್ಕಾರ ಆ ಯೋಜನೆಯನ್ನು ಸಹ ಕಡಿತಗೊಳಿಸಿದೆ. ಕೃಷಿ ವಿಶ್ವವಿದ್ಯಾಲಯವನ್ನು ಹೋದ ಬಜೆಟ್ಟಿನಲ್ಲಿ ಸಹ ಘೋಷಣೆಯನ್ನು ಮಾಡಿತ್ತು. ಮತ್ತೆ ಈ ಸಾರಿಯೂ ಘೋಷಣೆ ಮಾಡಿದೆ. ಹಾಗಾದರೆ ಹೋದ ಬಜೆಟ್ಟಿನಲ್ಲಿ ಘೋಷಣೆ ಮಾಡಿದ ಹಣ ಎಲ್ಲಿ ಹೋಯಿತು ಎಂಬ ಯಕ್ಷಪ್ರಶ್ನೆ ನಮ್ಮನ್ನು ಕಾಡುತ್ತಿದೆ ಎಂದರು.
ಇನ್ನೂ ಸಮಯ ಮಿಂಚಿಲ್ಲ. ರೈತರ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಮೂರು ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಮತ್ತು ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಕಬ್ಬಿನ ಸೂಕ್ತ ಬೆಲೆಯನ್ನು ಘೋಷಿಸಬೇಕು ಹಾಗೂ ರೈತರ ಸಾಲವನ್ನು ಸಂಪೂರ್ಣವಾಗಿ ಮಾಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರೈತ ಕುಲ ಈ ರೈತ ವಿರೋಧಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು