7:28 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸಾಲ ಮನ್ನಾ ಘೋಷಿಸದ ಬೊಮ್ಮಾಯಿ ಬಜೆಟ್ ರೈತ ವಿರೋಧಿ: ರೈತ ಮುಖಂಡ ಮಹಾದೇವ ಮಡಿವಾಳ ಆಕ್ರೋಶ

18/02/2023, 15:07

ರಾಹುಲ್ ಅಥಣಿ ಬೆಳಗಾಗಾವಿ

info.reporterkarnataka@gmail.ಕಾಂ

ರೈತರ ಸಾಲ ಮನ್ನಾ ಮಾಡುತ್ತದೆ ಎಂದು ಬಿಜೆಪಿ ಸರ್ಕಾರದ ಮೇಲೆ ಬಹು ನಿರೀಕ್ಷೆ ಇತ್ತು. ಆದರೆ ಈ ಬಜೆಟ್ ನಲ್ಲಿ ರೈತರಿಗೆ ಅನುಕೂಲವಾಗುವ ಯಾವುದೇ ಯೋಜನೆಗಳನ್ನು ಘೋಷಿಸಿಲ್ಲ. ಇದೊಂದು ರೈತ ವಿರೋಧಿ ಬಜೆಟ್ ಎಂದು ರೈತ ಮುಖಂಡ ಮಹಾದೇವ ಮಡಿವಾಳ ಬೊಮ್ಮಾಯಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಒಳಿತು ಮಾಡುತ್ತೇನೆ ಎಂದು ಹೇಳಿದ ಸರ್ಕಾರ ರೈತ ವಿರೋಧಿ ನೀತಿಗಳನ್ನು ತಂದಿರುವುದಲ್ಲದೆ ಈ ವರ್ಷದ ಬಜೆಟ್ ನಲ್ಲಿ ರೈತರಿಗೆ ಉಪಯೋಗವಾಗದ ಯೋಜನೆಯನ್ನು ಘೋಷಿಸಿ ರೈತ ಕುಲಕ್ಕೆ ಅನ್ಯಾಯ ಮಾಡಿದೆ ಎಂದು ಅವರು ಹೇಳಿದರು.

ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ರೂ ಕೊಡುತ್ತೇನೆ ಎಂಬುದು ಹೇಳಲು ಮಾತ್ರ ಚೆಂದ ಕೆಲವೊಂದು ಬ್ಯಾಂಕುಗಳು ರೈತರ ಒಂದು ಎಕರೆ ಹೊಲಕ್ಕೆ ಕೇವಲ 20 ಸಾವಿರಗಳನ್ನು ಮಾತ್ರ ಕೊಡುತ್ತದೆ. ಆದರೆ ಬೊಮ್ಮಾಯಿ ಅವರು ಹೇಳುತ್ತಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

ಹಿಂದೆ ಇದ್ದ ಸರ್ಕಾರ ಕೃಷಿ ಹೊಂಡಗಳಿಗೆ ಸುಮಾರು 100 ದಿನಗಳವರೆಗೆ ಕೆಲಸ ಕೊಡುತ್ತಿತ್ತು. ಆದರೆ ಇಂದು ಈ ಸರ್ಕಾರ ಆ ಯೋಜನೆಯನ್ನು ಸಹ ಕಡಿತಗೊಳಿಸಿದೆ. ಕೃಷಿ ವಿಶ್ವವಿದ್ಯಾಲಯವನ್ನು ಹೋದ ಬಜೆಟ್ಟಿನಲ್ಲಿ ಸಹ ಘೋಷಣೆಯನ್ನು ಮಾಡಿತ್ತು. ಮತ್ತೆ ಈ ಸಾರಿಯೂ ಘೋಷಣೆ ಮಾಡಿದೆ. ಹಾಗಾದರೆ ಹೋದ ಬಜೆಟ್ಟಿನಲ್ಲಿ ಘೋಷಣೆ ಮಾಡಿದ ಹಣ ಎಲ್ಲಿ ಹೋಯಿತು ಎಂಬ ಯಕ್ಷಪ್ರಶ್ನೆ ನಮ್ಮನ್ನು ಕಾಡುತ್ತಿದೆ ಎಂದರು.
ಇನ್ನೂ ಸಮಯ ಮಿಂಚಿಲ್ಲ. ರೈತರ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಮೂರು ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಮತ್ತು ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಕಬ್ಬಿನ ಸೂಕ್ತ ಬೆಲೆಯನ್ನು ಘೋಷಿಸಬೇಕು ಹಾಗೂ ರೈತರ ಸಾಲವನ್ನು ಸಂಪೂರ್ಣವಾಗಿ ಮಾಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ರೈತ ಕುಲ ಈ ರೈತ ವಿರೋಧಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು