10:50 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೆಮ್ಮಣ್ಣು: ಮೃತದೇಹ ಎಸೆದು ಹೋದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತನ ಪತ್ನಿ

19/02/2023, 11:24

ಉಡುಪಿ(reporterkarnataka.com): ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದ್ದ ಟೆಂಪೋ ರಿಕ್ಷಾದಲ್ಲಿ ಬಂದು ಕಸದ ಕೊಂಪೆಗೆ ಕೂಲಿ‌ಕಾರ್ಮಿಕನ ಮೃತದೇಹ ಎಸೆದು ಹೋದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಕೂಲಿ ಕಾರ್ಮಿಕನ ಪತ್ನಿ ತನ್ನ ಗಂಡನ ಸಾವಿನಲ್ಲಿ ಸಂಶಯವಿದೆ ಎಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಏನಿದು ಪ್ರಕರಣ.?: ಫೆ.16ರಂದು ಮಧ್ಯಾಹ್ನ ಟೆಂಪೋ ರಕ್ಷಾದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕೆಮ್ಮಣ್ಣುವಿನ ಸಂತೆ ಮಾರ್ಕೆಟ್ ಬಳಿ ಕಸದ ಕೊಂಪೆಗೆ ವ್ಯಕ್ತಿಯೊಬ್ಬರನ್ನು ಎಸೆದು ಹೋಗಿದ್ದರು. ಆದರೆ ಆ ವ್ಯಕ್ತಿ ಬಳಿಕ ಮೃತಪಟ್ಟಿದ್ದನು.‌ ವ್ಯಕ್ತಿಯನ್ನು ಎಸೆದು ಹೋಗುವ ದೃಶ್ಯ ಅಲ್ಲೆ ಎದುರಿನ ಆಭರಣ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿಯ‌ ದೃಶ್ಯ ವೈರಲ್ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿತ್ತು.

ಬಳಿಕ ಪೊಲೀಸರು ವ್ಯಕ್ತಿಯನ್ನು ಎಸೆದುಹೋದ ಬಸವರಾಜ್ ನಾಗಪ್ಪ ಹಳೆಮನೆ ಹಾಗೂ ಇನ್ನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ಹನುಮಂತಪ್ಪ (39) ಎಂದು ಗೊತ್ತಾಗಿದೆ. ಈತ ಸಂತೆ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಕೆಮ್ಮಣ್ಣು ಸಂತೆಗೆ ಪರಿಚಯದ ಬಸವರಾಜ್ ನಾಗಪ್ಪ ಹಳೆಮನೆ ಎಂಬಾತನೊಂದಿಗೆ ಬಂದಿದ್ದನು. ಆದರೆ, ಹನುಮಂತಪ್ಪನು ಎದೆನೋವು ಜ್ವರ ತಲೆನೋವು ಎಂದು ಹೇಳಿದ್ದು, ಆಗ ಬಸವರಾಜ್ ಜ್ವರದ ಮಾತ್ರೆ ಹಾಗೂ ಜಂಡು ಬಾಂಬ್ ತಂದು ಕೊಟ್ಟಿದ್ದನು.‌ ನಂತರ ಮಧ್ಯಾಹ್ನ ಸುಮಾರು 1.30 ಕ್ಕೆ ಬಸವರಾಜ್ ರಿಕ್ಷಾದ ಬಳಿ ಬಂದಾಗ ನೋಡಿದಾಗ ಹನುಮಂತಪ್ಪ ಮಲಗಿದ್ದು, ಎಷ್ಟೇ ಕರೆದು ಎಬ್ಬಿಸಿದರೂ ಏಳದೆ ಇದ್ದಾಗ ಮದ್ಯಪಾನ ಮಾಡಿ ಮಲಗಿರಬಹುದು ಎಂದು ಊಹಿಸಿ ಆತನನ್ನು ರಿಕ್ಷಾದಿಂದ ಕೆಳಗೆ ಇಳಿಸಿ ರಸ್ತೆಯ ಬದಿ ಮರದ ನೆರಳಿನಲ್ಲಿ ಮಲಗಿಸಿ ಹೋಗಿರುವುದಾಗಿ ವಿಚಾರಣೆ ವೇಳೆ ಬಸವರಾಜ್ ಬಾಯಿಟ್ಟಿದ್ದಾನೆ.

ಮೇಲ್ನೋಟಕ್ಕೆ ಇದು ಕೊಲೆಯಲ್ಲ: ಎಸ್ಪಿ ಮೇಲ್ನೋಟಕ್ಕೆ ಪರಿಶೀಲನೆ ನಡೆಸಿದಾಗ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿರಲಿಲ್ಲ. ಕೊಲೆ ಎಂಬುವುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಎಸ್ಪಿ ಅಕ್ಷಯ್ ಮಚ್ಚೀಂದ್ರ ಹೇಳಿದ್ದಾರೆ.

ಪತಿಯ ಸಾವಿನಲ್ಲಿ ಸಂಶಯವಿದೆ: ಪತ್ನಿ ಮಂಜುಳಾ
ಉಡುಪಿಗೆ ಆಗಮಿಸಿರುವ ಮೃತ ಹನುಮಂತಪ್ಪನ ಪತ್ನಿ ಮಂಜುಳಾ ಅವರು ನನ್ನ ಪತಿಯ ಸಾವಿನಲ್ಲಿ ಸಂಶಯವಿದೆ. ಹಾಗಾಗಿ ಸೂಕ್ತ ತನಿಖೆ‌ ನಡೆಸುವಂತೆ ಆಗ್ರಹಿಸಿ ದೂರು ನೀಡಿದ್ಧಾರೆ. ಅದರ ಆಧಾರದಲ್ಲಿ ತನಿಖೆ ಮುಂದುವರಿದಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು