5:29 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆಮ್ಮಣ್ಣು: ಮೃತದೇಹ ಎಸೆದು ಹೋದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ಮೃತನ ಪತ್ನಿ

19/02/2023, 11:24

ಉಡುಪಿ(reporterkarnataka.com): ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದ್ದ ಟೆಂಪೋ ರಿಕ್ಷಾದಲ್ಲಿ ಬಂದು ಕಸದ ಕೊಂಪೆಗೆ ಕೂಲಿ‌ಕಾರ್ಮಿಕನ ಮೃತದೇಹ ಎಸೆದು ಹೋದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮೃತ ಕೂಲಿ ಕಾರ್ಮಿಕನ ಪತ್ನಿ ತನ್ನ ಗಂಡನ ಸಾವಿನಲ್ಲಿ ಸಂಶಯವಿದೆ ಎಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಏನಿದು ಪ್ರಕರಣ.?: ಫೆ.16ರಂದು ಮಧ್ಯಾಹ್ನ ಟೆಂಪೋ ರಕ್ಷಾದಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕೆಮ್ಮಣ್ಣುವಿನ ಸಂತೆ ಮಾರ್ಕೆಟ್ ಬಳಿ ಕಸದ ಕೊಂಪೆಗೆ ವ್ಯಕ್ತಿಯೊಬ್ಬರನ್ನು ಎಸೆದು ಹೋಗಿದ್ದರು. ಆದರೆ ಆ ವ್ಯಕ್ತಿ ಬಳಿಕ ಮೃತಪಟ್ಟಿದ್ದನು.‌ ವ್ಯಕ್ತಿಯನ್ನು ಎಸೆದು ಹೋಗುವ ದೃಶ್ಯ ಅಲ್ಲೆ ಎದುರಿನ ಆಭರಣ ಮಳಿಗೆಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿಯ‌ ದೃಶ್ಯ ವೈರಲ್ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿತ್ತು.

ಬಳಿಕ ಪೊಲೀಸರು ವ್ಯಕ್ತಿಯನ್ನು ಎಸೆದುಹೋದ ಬಸವರಾಜ್ ನಾಗಪ್ಪ ಹಳೆಮನೆ ಹಾಗೂ ಇನ್ನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಗ ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ಹನುಮಂತಪ್ಪ (39) ಎಂದು ಗೊತ್ತಾಗಿದೆ. ಈತ ಸಂತೆ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಕೆಮ್ಮಣ್ಣು ಸಂತೆಗೆ ಪರಿಚಯದ ಬಸವರಾಜ್ ನಾಗಪ್ಪ ಹಳೆಮನೆ ಎಂಬಾತನೊಂದಿಗೆ ಬಂದಿದ್ದನು. ಆದರೆ, ಹನುಮಂತಪ್ಪನು ಎದೆನೋವು ಜ್ವರ ತಲೆನೋವು ಎಂದು ಹೇಳಿದ್ದು, ಆಗ ಬಸವರಾಜ್ ಜ್ವರದ ಮಾತ್ರೆ ಹಾಗೂ ಜಂಡು ಬಾಂಬ್ ತಂದು ಕೊಟ್ಟಿದ್ದನು.‌ ನಂತರ ಮಧ್ಯಾಹ್ನ ಸುಮಾರು 1.30 ಕ್ಕೆ ಬಸವರಾಜ್ ರಿಕ್ಷಾದ ಬಳಿ ಬಂದಾಗ ನೋಡಿದಾಗ ಹನುಮಂತಪ್ಪ ಮಲಗಿದ್ದು, ಎಷ್ಟೇ ಕರೆದು ಎಬ್ಬಿಸಿದರೂ ಏಳದೆ ಇದ್ದಾಗ ಮದ್ಯಪಾನ ಮಾಡಿ ಮಲಗಿರಬಹುದು ಎಂದು ಊಹಿಸಿ ಆತನನ್ನು ರಿಕ್ಷಾದಿಂದ ಕೆಳಗೆ ಇಳಿಸಿ ರಸ್ತೆಯ ಬದಿ ಮರದ ನೆರಳಿನಲ್ಲಿ ಮಲಗಿಸಿ ಹೋಗಿರುವುದಾಗಿ ವಿಚಾರಣೆ ವೇಳೆ ಬಸವರಾಜ್ ಬಾಯಿಟ್ಟಿದ್ದಾನೆ.

ಮೇಲ್ನೋಟಕ್ಕೆ ಇದು ಕೊಲೆಯಲ್ಲ: ಎಸ್ಪಿ ಮೇಲ್ನೋಟಕ್ಕೆ ಪರಿಶೀಲನೆ ನಡೆಸಿದಾಗ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿರಲಿಲ್ಲ. ಕೊಲೆ ಎಂಬುವುದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಎಸ್ಪಿ ಅಕ್ಷಯ್ ಮಚ್ಚೀಂದ್ರ ಹೇಳಿದ್ದಾರೆ.

ಪತಿಯ ಸಾವಿನಲ್ಲಿ ಸಂಶಯವಿದೆ: ಪತ್ನಿ ಮಂಜುಳಾ
ಉಡುಪಿಗೆ ಆಗಮಿಸಿರುವ ಮೃತ ಹನುಮಂತಪ್ಪನ ಪತ್ನಿ ಮಂಜುಳಾ ಅವರು ನನ್ನ ಪತಿಯ ಸಾವಿನಲ್ಲಿ ಸಂಶಯವಿದೆ. ಹಾಗಾಗಿ ಸೂಕ್ತ ತನಿಖೆ‌ ನಡೆಸುವಂತೆ ಆಗ್ರಹಿಸಿ ದೂರು ನೀಡಿದ್ಧಾರೆ. ಅದರ ಆಧಾರದಲ್ಲಿ ತನಿಖೆ ಮುಂದುವರಿದಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು