5:30 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ತಾಯಿ ಗದರಿಸಿದಕ್ಕೆ ವಿಷ ಸೇವಿಸಿದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು

19/02/2023, 14:20

ಮಂಗಳೂರು(reporterkarnataka.com): ತಾಯಿ ಗದರಿಸಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ವಯಸ್ಸಿನ ಕುಂಪಲದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾಳೆ.

ಕುಂಪಲ ಆಶ್ರಯ ಕಾಲೊನಿಯಲ್ಲಿ ವಾಸವಿದ್ದ ಸೋಮನಾಥ ಮತ್ತು ಭವ್ಯಾ ದಂಪತಿ ಹಿರಿಯ ಪುತ್ರಿ ಧನ್ಯಾ (17) ಮೃತ ವಿದ್ಯಾರ್ಥಿನಿ. ಮೂಲತಃ ಇವರು ತಮಿಳುನಾಡಿನವರು.

ಈಕೆ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಫೆ. 14 ರಂದು ಧನ್ಯಾ ತಾಯಿ ಭವ್ಯಾ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು, ಈ ವೇಳೆ ತಾಯಿ ಮಗಳನ್ನು ಪ್ರಶ್ನಿಸಿದ್ದು, ಇದಕ್ಕೆ ಧನ್ಯಾ ಗೆಳತಿ ಮ‌ನೆಗೆ ಓದಲು ಹೋಗಿದ್ದೆ ಎಂದು ಹೇಳಿದ್ದಾಳೆ. ಫೋನ್ ಯಾಕೇ ಮಾಡಲಿಲ್ಲ ತಾಯಿ ಗದರಿದ್ದಕ್ಕೆ ವಿಷ ಸೇವಿಸಿದ್ದಾಳೆ. ಮನೆಯಲ್ಲಿ ಇದ್ದ ಗೆದ್ದಲಿಗೆ ಹೊಡೆವ ಕೀಟ ನಾಶಕ ಸೇವಿಸಿದ್ದಾಳೆ. ಆಕೆಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಧನ್ಯಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.

ಮೃತಳ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯಾ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ, ಸಂಜೆ ವೇಳೆಯಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಒಬ್ಬ ಮಗ ಕೂಡ ಇದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು