5:24 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ತಾಯಿ ಗದರಿಸಿದಕ್ಕೆ ವಿಷ ಸೇವಿಸಿದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು

19/02/2023, 14:20

ಮಂಗಳೂರು(reporterkarnataka.com): ತಾಯಿ ಗದರಿಸಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ವಯಸ್ಸಿನ ಕುಂಪಲದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾಳೆ.

ಕುಂಪಲ ಆಶ್ರಯ ಕಾಲೊನಿಯಲ್ಲಿ ವಾಸವಿದ್ದ ಸೋಮನಾಥ ಮತ್ತು ಭವ್ಯಾ ದಂಪತಿ ಹಿರಿಯ ಪುತ್ರಿ ಧನ್ಯಾ (17) ಮೃತ ವಿದ್ಯಾರ್ಥಿನಿ. ಮೂಲತಃ ಇವರು ತಮಿಳುನಾಡಿನವರು.

ಈಕೆ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಫೆ. 14 ರಂದು ಧನ್ಯಾ ತಾಯಿ ಭವ್ಯಾ ಮನೆಗೆ ತೆರಳಿದಾಗ ಮನೆಯಲ್ಲಿ ಮಗಳು ಇರಲಿಲ್ಲ. ಮಧ್ಯಾಹ್ನ 3 ಗಂಟೆಗೆ ಧನ್ಯಾ ಮನೆಗೆ ಮರಳಿದ್ದು, ಈ ವೇಳೆ ತಾಯಿ ಮಗಳನ್ನು ಪ್ರಶ್ನಿಸಿದ್ದು, ಇದಕ್ಕೆ ಧನ್ಯಾ ಗೆಳತಿ ಮ‌ನೆಗೆ ಓದಲು ಹೋಗಿದ್ದೆ ಎಂದು ಹೇಳಿದ್ದಾಳೆ. ಫೋನ್ ಯಾಕೇ ಮಾಡಲಿಲ್ಲ ತಾಯಿ ಗದರಿದ್ದಕ್ಕೆ ವಿಷ ಸೇವಿಸಿದ್ದಾಳೆ. ಮನೆಯಲ್ಲಿ ಇದ್ದ ಗೆದ್ದಲಿಗೆ ಹೊಡೆವ ಕೀಟ ನಾಶಕ ಸೇವಿಸಿದ್ದಾಳೆ. ಆಕೆಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಧನ್ಯಾ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.

ಮೃತಳ ತಂದೆ ಸೋಮನಾಥ್ ಮೇಸ್ತ್ರಿ ಕೆಲಸ ಮಾಡುತ್ತಿದ್ದು, ತಾಯಿ ಭವ್ಯಾ ಉಪ್ಪಿನ ಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿ, ಸಂಜೆ ವೇಳೆಯಲ್ಲಿ ಮನೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಒಬ್ಬ ಮಗ ಕೂಡ ಇದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು