5:50 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರ ಕೊಡುಗೆ ಅತ್ಯಮೂಲ್ಯ: ಶಾಸಕ ವೇದವ್ಯಾಸ ಕಾಮತ್

19/02/2023, 23:45

ಮಂಗಳೂರು(reporterkarnataka.com): ದೇಶ ಹಾಗೂ ಹಿಂದೂ ಸಮಾಜಕ್ಕೆ ಛತ್ರಪತಿ ಶಿವಾಜಿ ಮಹಾರಾಜರು ನೀಡಿದ ಕೊಡುಗೆ ಅತ್ಯಮೂಲ್ಯವಾದದ್ದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಬಣ್ಣಿಸಿದರು.

ಅವರು ಭಾನುವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದಕ್ಷಿಣ ಕನ್ನಡ ಹಾಗೂ ಜಿಲ್ಲೆಯ ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿಯವರ 396ನೇ ಜಯಂತಿಯಲ್ಲಿ ಮಾತನಾಡಿದರು.

ಹಿಂದೂ ಸಮಾಜ ಸಂಘಟಿತರಾಗಲು ಶಿವಾಜಿ ಮಹಾರಾಜರು ಆದರ್ಶ ಪ್ರಾಯವಾಗಿದ್ದಾರೆ, ಈ ಸಮಾಜ ಹಲವು ಸವಾಲು ಸಮಸ್ಯೆಗಳನ್ನು ಎದುರಿಸಿ ಎದ್ದು ಹೋರಾಟ ಮಾಡಲು ಶಿವಾಜಿ ಕಾರಣರು, ಅವರ ದೇಶಭಕ್ತಿ ಹಾಗೂ ಹಿಂದೂ ಸಮಾಜ ಉಳಿಸಿಕೊಳ್ಳುವ ಅವರ ಛಲಕ್ಕೆ ಅವರ ತಾಯಿ ಜೀಜಾಬಾಯಿ ನೀಡಿದ ವಿಶೇಷ ಪ್ರೇರಣೆಯು ಪ್ರಮುಖ ಕಾರಣ, ಆದ್ದರಿಂದ ಅವರು ಪೂಜನೀಯ ಸ್ಥಾನದಲ್ಲಿದ್ದಾರೆ ಅವರು ತಮ್ಮ ಕಾಲಘಟ್ಟದಲ್ಲಿ ಹಿಂದೂ ಸಮಾಜವನ್ನು ಒಟ್ಟಾಗಿ ಸೇರಿಸುವ ಕೆಲಸ ಮಾಡಿದರು ಎಂದು ಹೇಳಿದರು.

ನಗರದ ಪಂಪ್ ವೆಲ್ ಮೇಲ್ಸೆತುವೆಯ ಹತ್ತಿರದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮರಾಠ ಪರಿಷತ್ ಹಾಗೂ ಸರ್ಕಾರದ ಸಹಯೋಗದಲ್ಲಿ ನಿರ್ಮಿಸಲು ಚಿಂತಿಸಲಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ಮೇಯರ್, ಉಪ ಮೇಯರ್ ಹಾಗೂ ಮರಾಠ ಸಮಾಜದ ಮುಖಂಡರೊಂದಿಗೆ ಸಭೆ ಮಾಡಲಾಗಿದೆ, ಸ್ಥಳವನ್ನು ಅಂತಿಮಗೊಳಿಸಿ, ಚುನಾವಣೆಗೂ ಮುನ್ನ ಶಿಲನ್ಯಾಸ ನೆರವೇರಿಸುವುದಾಗಿ ಅವರು ತಿಳಿಸಿದರು.


ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕುದ್ರೋಳಿಯ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ, ಈ ದೇಶ ಶಿವಾಜಿಯನ್ನು ಮರೆಯಲು ಸಾಧ್ಯವಿಲ್ಲ, ದೇಶದ ಚರಿತ್ರೆಯು ಶಿವಾಜಿಯನ್ನು ಮರೆಯುವಂತಿಲ್ಲ ಶಿವಾಜಿ ವ್ಯಕ್ತಿಯಲ್ಲ ಆ ಕಾಲಮಾನಕ್ಕೆ ಹುಟ್ಟಿ ಬಂದ ಅವತಾರ. 1674ರಲ್ಲಿ ಶಿವಾಜಿಯವರ ಪಟ್ಟಾಭಿಷೇಕವಾಯಿತು, ಅಂದು ಅವರು ಸ್ಥಾಪಿಸಿದ ಸ್ವರಾಜ್ಯ ತಾಯಿ ಜೀಜಾಬಾಯಿಯ ಮಡಿಲಿನಲ್ಲಿ ತಮ್ಮ ಎಳವೆಯಿಂದ ಕಲಿತ ಹಿಂದೂ ಸಂಸ್ಕೃತಿಯ ಸಾಕಾರ ಕಲ್ಪನೆ, ಮೂಲತಃ ಸ್ನೇಹಜೀವಿ ಶಿವಾಜಿಯವರ ಚಿಂತನೆಗಳ ಫಲ ಕ್ರಿ.ಶ. 1857ರ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ, ಇಡೀ ದಕ್ಷಿಣ ಭಾರತವನ್ನು ಹೆದರಿಸಿದ್ದ ಅಫ್ಜಲ್ ಖಾನ್ ನನ್ನು ಚಾಣಾಕ್ಷತೆಯಿಂದ ಕುಂದುಹಾಕಿದ್ದು ಶಿವಾಜಿ ಎಂದು ಹೇಳಿದರು.
ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ನ ಜಿಲ್ಲಾಧ್ಯಕ್ಷ ಸುರೇಶ್ ರಾವ್, ಮಂಗಳೂರು ಆರ್ಯ ಯಾನೆ ಮರಾಠ ಸಮಾಜದ ಸಂಘದ ಅಧ್ಯಕ್ಷ ವಾಮನ್ ವಾಗ್ಮನ್ ಮುಳ್ಳಂಗೋಡು ಶುಭಹಾರೈಸಿದರು. ಇತರೆ ಗಣ್ಯರು ವೇದಿಕೆಯಲ್ಲಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿದರು. ಶ್ರೀಮತಿ ಬಬಿತಾ ನಿರೂಪಿಸಿದರು. ಶಿವಾಜಿ ಅಭಿಮಾನಿಗಳು, ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಇತ್ತೀಚಿನ ಸುದ್ದಿ

ಜಾಹೀರಾತು