5:25 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮೇಕೇರಿ ದೇವಸ್ಥಾನದಲ್ಲಿ ಸಂಭ್ರಮ- ಸಡಗರದ ಶಿವರಾತ್ರಿ ಮಹೋತ್ಸವ: ಶಂಖನಾದದೊಂದಿಗೆ ಹೊರೆ ಕಾಣಿಕೆ ಸಮರ್ಪಣೆ

20/02/2023, 01:04

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶನಿವಾರ ಶಿವರಾತ್ರಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಶನಿವಾರ ಬೆಳಗ್ಗೆ ಗ್ರಾಮದ ಸುಭಾಶ್ ನಗರ, ಕಾವೇರಿಬಡಾವಣೆ, ಶಕ್ತಿನಗರ, ಬಿಳಿಗೇರಿ ಜಂಕ್ಷನ್ ನ್ ಹೀಗೆ ನಾಲ್ಕು ದಿಕ್ಕುಗಳಿಂದ ಚಂಡೆ, ವಾದ್ಯ, ಶಂಖನಾದದೊಂದಿಗೆ ಏಕಕಾಲಕ್ಕೆ ಹೊರೆಕಾಣಿಕೆಯನ್ನು ದೇವಾಲಯಕ್ಕೆ ತಂದು ಶಿವಾರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಉಷಾಪೇಜೆ, ಮಾಹಾ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ಮ ಸಂತರ್ಪಣೆ ನಡೆಯಿತು.
ಶನಿವಾರ ರಾತ್ರಿ ಶಾಸಕ ಕೆ.ಜಿ.ಬೋಪಯ್ಯ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಸಾಂಸ್ಕ್ರತಿಕ ಕಾರ್ಯಕ್ರಮ: ಶಿವರಾತ್ರಿ ಪ್ರಯುಕ್ತ ಶ್ರೀ ಗೌರೀಶಂಕರ ಕಲಾ ವೇದಿಕೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮಕ್ಕಳಿಂದ ಮತ್ತು ಮೂರ್ನಾಡಿನ ಭಾರತೀಯ ನೃತ್ಯಶಾಲೆಯ ತಂಡದ ನೃತ್ಯಗಳು ಸಭಿಕರ ಮನಸೂರೆಗೊಂಡವು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿತಿನ್ ನಿರೂಪಿಸಿದರು.
ನಂತರ ರಾತ್ರಿ ಶಿವರಾತ್ರಿ ಜಾಗರಣೆಗಾಗಿ ಸುಳ್ಯದ ಯುವಕ ಯಕ್ಷಗಾನ ಕಲಾರಂಗದಿಂದ ಯಕ್ಷ-ಗಾನ-ನಾಟ್ಯ-ವೈಭವ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು