8:01 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮೇಕೇರಿ ದೇವಸ್ಥಾನದಲ್ಲಿ ಸಂಭ್ರಮ- ಸಡಗರದ ಶಿವರಾತ್ರಿ ಮಹೋತ್ಸವ: ಶಂಖನಾದದೊಂದಿಗೆ ಹೊರೆ ಕಾಣಿಕೆ ಸಮರ್ಪಣೆ

20/02/2023, 01:04

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶನಿವಾರ ಶಿವರಾತ್ರಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಶನಿವಾರ ಬೆಳಗ್ಗೆ ಗ್ರಾಮದ ಸುಭಾಶ್ ನಗರ, ಕಾವೇರಿಬಡಾವಣೆ, ಶಕ್ತಿನಗರ, ಬಿಳಿಗೇರಿ ಜಂಕ್ಷನ್ ನ್ ಹೀಗೆ ನಾಲ್ಕು ದಿಕ್ಕುಗಳಿಂದ ಚಂಡೆ, ವಾದ್ಯ, ಶಂಖನಾದದೊಂದಿಗೆ ಏಕಕಾಲಕ್ಕೆ ಹೊರೆಕಾಣಿಕೆಯನ್ನು ದೇವಾಲಯಕ್ಕೆ ತಂದು ಶಿವಾರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಉಷಾಪೇಜೆ, ಮಾಹಾ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ಮ ಸಂತರ್ಪಣೆ ನಡೆಯಿತು.
ಶನಿವಾರ ರಾತ್ರಿ ಶಾಸಕ ಕೆ.ಜಿ.ಬೋಪಯ್ಯ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಸಾಂಸ್ಕ್ರತಿಕ ಕಾರ್ಯಕ್ರಮ: ಶಿವರಾತ್ರಿ ಪ್ರಯುಕ್ತ ಶ್ರೀ ಗೌರೀಶಂಕರ ಕಲಾ ವೇದಿಕೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮಕ್ಕಳಿಂದ ಮತ್ತು ಮೂರ್ನಾಡಿನ ಭಾರತೀಯ ನೃತ್ಯಶಾಲೆಯ ತಂಡದ ನೃತ್ಯಗಳು ಸಭಿಕರ ಮನಸೂರೆಗೊಂಡವು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿತಿನ್ ನಿರೂಪಿಸಿದರು.
ನಂತರ ರಾತ್ರಿ ಶಿವರಾತ್ರಿ ಜಾಗರಣೆಗಾಗಿ ಸುಳ್ಯದ ಯುವಕ ಯಕ್ಷಗಾನ ಕಲಾರಂಗದಿಂದ ಯಕ್ಷ-ಗಾನ-ನಾಟ್ಯ-ವೈಭವ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು