11:12 PM Wednesday16 - September 2026
ಬ್ರೇಕಿಂಗ್ ನ್ಯೂಸ್
ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ…

ಇತ್ತೀಚಿನ ಸುದ್ದಿ

ಮೇಕೇರಿ ದೇವಸ್ಥಾನದಲ್ಲಿ ಸಂಭ್ರಮ- ಸಡಗರದ ಶಿವರಾತ್ರಿ ಮಹೋತ್ಸವ: ಶಂಖನಾದದೊಂದಿಗೆ ಹೊರೆ ಕಾಣಿಕೆ ಸಮರ್ಪಣೆ

20/02/2023, 01:04

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶನಿವಾರ ಶಿವರಾತ್ರಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಶನಿವಾರ ಬೆಳಗ್ಗೆ ಗ್ರಾಮದ ಸುಭಾಶ್ ನಗರ, ಕಾವೇರಿಬಡಾವಣೆ, ಶಕ್ತಿನಗರ, ಬಿಳಿಗೇರಿ ಜಂಕ್ಷನ್ ನ್ ಹೀಗೆ ನಾಲ್ಕು ದಿಕ್ಕುಗಳಿಂದ ಚಂಡೆ, ವಾದ್ಯ, ಶಂಖನಾದದೊಂದಿಗೆ ಏಕಕಾಲಕ್ಕೆ ಹೊರೆಕಾಣಿಕೆಯನ್ನು ದೇವಾಲಯಕ್ಕೆ ತಂದು ಶಿವಾರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಉಷಾಪೇಜೆ, ಮಾಹಾ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ಮ ಸಂತರ್ಪಣೆ ನಡೆಯಿತು.
ಶನಿವಾರ ರಾತ್ರಿ ಶಾಸಕ ಕೆ.ಜಿ.ಬೋಪಯ್ಯ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಸಾಂಸ್ಕ್ರತಿಕ ಕಾರ್ಯಕ್ರಮ: ಶಿವರಾತ್ರಿ ಪ್ರಯುಕ್ತ ಶ್ರೀ ಗೌರೀಶಂಕರ ಕಲಾ ವೇದಿಕೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮಕ್ಕಳಿಂದ ಮತ್ತು ಮೂರ್ನಾಡಿನ ಭಾರತೀಯ ನೃತ್ಯಶಾಲೆಯ ತಂಡದ ನೃತ್ಯಗಳು ಸಭಿಕರ ಮನಸೂರೆಗೊಂಡವು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿತಿನ್ ನಿರೂಪಿಸಿದರು.
ನಂತರ ರಾತ್ರಿ ಶಿವರಾತ್ರಿ ಜಾಗರಣೆಗಾಗಿ ಸುಳ್ಯದ ಯುವಕ ಯಕ್ಷಗಾನ ಕಲಾರಂಗದಿಂದ ಯಕ್ಷ-ಗಾನ-ನಾಟ್ಯ-ವೈಭವ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು