6:48 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮೇಕೇರಿ ದೇವಸ್ಥಾನದಲ್ಲಿ ಸಂಭ್ರಮ- ಸಡಗರದ ಶಿವರಾತ್ರಿ ಮಹೋತ್ಸವ: ಶಂಖನಾದದೊಂದಿಗೆ ಹೊರೆ ಕಾಣಿಕೆ ಸಮರ್ಪಣೆ

20/02/2023, 01:04

ಮಡಿಕೇರಿ(reporterkarnataka.com): ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮದ ಶ್ರೀ ಗೌರೀಶಂಕರ ದೇವಾಲಯದಲ್ಲಿ ಶನಿವಾರ ಶಿವರಾತ್ರಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಶನಿವಾರ ಬೆಳಗ್ಗೆ ಗ್ರಾಮದ ಸುಭಾಶ್ ನಗರ, ಕಾವೇರಿಬಡಾವಣೆ, ಶಕ್ತಿನಗರ, ಬಿಳಿಗೇರಿ ಜಂಕ್ಷನ್ ನ್ ಹೀಗೆ ನಾಲ್ಕು ದಿಕ್ಕುಗಳಿಂದ ಚಂಡೆ, ವಾದ್ಯ, ಶಂಖನಾದದೊಂದಿಗೆ ಏಕಕಾಲಕ್ಕೆ ಹೊರೆಕಾಣಿಕೆಯನ್ನು ದೇವಾಲಯಕ್ಕೆ ತಂದು ಶಿವಾರ್ಪಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಉಷಾಪೇಜೆ, ಮಾಹಾ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ಮ ಸಂತರ್ಪಣೆ ನಡೆಯಿತು.
ಶನಿವಾರ ರಾತ್ರಿ ಶಾಸಕ ಕೆ.ಜಿ.ಬೋಪಯ್ಯ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಸಾಂಸ್ಕ್ರತಿಕ ಕಾರ್ಯಕ್ರಮ: ಶಿವರಾತ್ರಿ ಪ್ರಯುಕ್ತ ಶ್ರೀ ಗೌರೀಶಂಕರ ಕಲಾ ವೇದಿಕೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮಕ್ಕಳಿಂದ ಮತ್ತು ಮೂರ್ನಾಡಿನ ಭಾರತೀಯ ನೃತ್ಯಶಾಲೆಯ ತಂಡದ ನೃತ್ಯಗಳು ಸಭಿಕರ ಮನಸೂರೆಗೊಂಡವು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಜಿತಿನ್ ನಿರೂಪಿಸಿದರು.
ನಂತರ ರಾತ್ರಿ ಶಿವರಾತ್ರಿ ಜಾಗರಣೆಗಾಗಿ ಸುಳ್ಯದ ಯುವಕ ಯಕ್ಷಗಾನ ಕಲಾರಂಗದಿಂದ ಯಕ್ಷ-ಗಾನ-ನಾಟ್ಯ-ವೈಭವ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು