3:54 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ: 66 ದೇಶಗಳಿಂದ ಬಂದ ಭಕ್ತರ ದಂಡು

20/02/2023, 11:23

ಬೆಂಗಳೂರು(reporterkarnataka.com): ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 66 ದೇಶಗಳಿಂದ ಬಂದ ಭಕ್ತರು ಮಹಾಶಿವರಾತ್ರಿಯ ಮಹೋತ್ಸವದಲ್ಲಿ ಪಾಲ್ಗೊಂಡರು. ಜಾಗತಿಕ ಮಾನವತಾವಾದಿಗಳಾದ, ಆಧ್ಯಾತ್ಮಿಕ ಗುರುಗಳಾದ ಗುರುದೇವ್ ಶ್ರೀ ಶ್ರೀ ರವಿಶಂಕರರ ಸಾನ್ನಿಧ್ಯದಲ್ಲಿ ನಡೆದ ವೈದಿಕ ಮಂತ್ರ ಪಠಣ ಭಜನೆ, ಡೋಲು, ತಾಳ ವಾದ್ಯಗಳ ನಾದ ಮುಗಿಲು ಮುಟ್ಟಿತು.

ಆರ್ಟ್ ಆಫ್ ಲಿವಿಂಗ್ ನ ವೈದಿಕ ಪರಂಪರೆಯ ಶಾಲೆಯಾದ ವೇದ ಆಗಮ ಸಂಸ್ಕೃತ ಮಹಾಪಾಠಶಾಲೆಯ ವೈದಿಕ ಪಂಡಿತರು ನಡೆಸಿಕೊಟ್ಟ ಮಹಾ ರುದ್ರಾಭಿಷೇಕದಿಂದ ವಾತಾವರಣವೆಲ್ಲವೂ ಪವಿತ್ರ ಕಂಪನಗಳಿಂದ ತುಂಬಿತ್ತು.


ಮಹೋತ್ಸವದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಿತು. ವಾಣಿಕ ಗುಪ್ತರವರಿಂದ ಮೋಹನ ವೀಣೆ ವಾದನ ನಡೆಯಿತು. ಮಹಾರುದ್ರ ಪೂಜೆಯ ಗುರುದೇವ್ ಶ್ರೀ ಶ್ರೀ ರವಿಶಂಕರರಿಂದ ನಿರ್ದೇಶಿತ ಧ್ಯಾನವನ್ನು ನಡೆಸಿಕೊಡಲಾಯಿತು. ಇದನ್ನು ಸಾವಿರಾರು ಸ್ಥಳಗಳಲ್ಲಿ ಜಾಲತಾಣದ ನೇರಪ್ರಸಾರ ಮಾಡಲಾಯಿತು. ” ಇಂಡಿಯ ಮೆಡಿಟೇಟ್ಸ್” ಚಳುವಳಿಯ ಅಂಗವಾಗಿ ಪ್ರತಿಯೊಂದು ಮನೆಯಲ್ಲೂ, ಉತ್ತಮ ಮಾನಸಿಕ ಆರೋಗ್ಯಕ್ಕಾಗಿ, ಆಂತರಿಕ ಶಾಂತಿಗಾಗಿ ಧ್ಯಾನ ಮಾಡಬೇಕೆಂದು ಗುರುದೇವರು ಪ್ರೋತ್ಸಾಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು