2:49 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ: 66 ದೇಶಗಳಿಂದ ಬಂದ ಭಕ್ತರ ದಂಡು

20/02/2023, 11:23

ಬೆಂಗಳೂರು(reporterkarnataka.com): ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 66 ದೇಶಗಳಿಂದ ಬಂದ ಭಕ್ತರು ಮಹಾಶಿವರಾತ್ರಿಯ ಮಹೋತ್ಸವದಲ್ಲಿ ಪಾಲ್ಗೊಂಡರು. ಜಾಗತಿಕ ಮಾನವತಾವಾದಿಗಳಾದ, ಆಧ್ಯಾತ್ಮಿಕ ಗುರುಗಳಾದ ಗುರುದೇವ್ ಶ್ರೀ ಶ್ರೀ ರವಿಶಂಕರರ ಸಾನ್ನಿಧ್ಯದಲ್ಲಿ ನಡೆದ ವೈದಿಕ ಮಂತ್ರ ಪಠಣ ಭಜನೆ, ಡೋಲು, ತಾಳ ವಾದ್ಯಗಳ ನಾದ ಮುಗಿಲು ಮುಟ್ಟಿತು.

ಆರ್ಟ್ ಆಫ್ ಲಿವಿಂಗ್ ನ ವೈದಿಕ ಪರಂಪರೆಯ ಶಾಲೆಯಾದ ವೇದ ಆಗಮ ಸಂಸ್ಕೃತ ಮಹಾಪಾಠಶಾಲೆಯ ವೈದಿಕ ಪಂಡಿತರು ನಡೆಸಿಕೊಟ್ಟ ಮಹಾ ರುದ್ರಾಭಿಷೇಕದಿಂದ ವಾತಾವರಣವೆಲ್ಲವೂ ಪವಿತ್ರ ಕಂಪನಗಳಿಂದ ತುಂಬಿತ್ತು.


ಮಹೋತ್ಸವದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಿತು. ವಾಣಿಕ ಗುಪ್ತರವರಿಂದ ಮೋಹನ ವೀಣೆ ವಾದನ ನಡೆಯಿತು. ಮಹಾರುದ್ರ ಪೂಜೆಯ ಗುರುದೇವ್ ಶ್ರೀ ಶ್ರೀ ರವಿಶಂಕರರಿಂದ ನಿರ್ದೇಶಿತ ಧ್ಯಾನವನ್ನು ನಡೆಸಿಕೊಡಲಾಯಿತು. ಇದನ್ನು ಸಾವಿರಾರು ಸ್ಥಳಗಳಲ್ಲಿ ಜಾಲತಾಣದ ನೇರಪ್ರಸಾರ ಮಾಡಲಾಯಿತು. ” ಇಂಡಿಯ ಮೆಡಿಟೇಟ್ಸ್” ಚಳುವಳಿಯ ಅಂಗವಾಗಿ ಪ್ರತಿಯೊಂದು ಮನೆಯಲ್ಲೂ, ಉತ್ತಮ ಮಾನಸಿಕ ಆರೋಗ್ಯಕ್ಕಾಗಿ, ಆಂತರಿಕ ಶಾಂತಿಗಾಗಿ ಧ್ಯಾನ ಮಾಡಬೇಕೆಂದು ಗುರುದೇವರು ಪ್ರೋತ್ಸಾಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು