9:31 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ: 66 ದೇಶಗಳಿಂದ ಬಂದ ಭಕ್ತರ ದಂಡು

20/02/2023, 11:23

ಬೆಂಗಳೂರು(reporterkarnataka.com): ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 66 ದೇಶಗಳಿಂದ ಬಂದ ಭಕ್ತರು ಮಹಾಶಿವರಾತ್ರಿಯ ಮಹೋತ್ಸವದಲ್ಲಿ ಪಾಲ್ಗೊಂಡರು. ಜಾಗತಿಕ ಮಾನವತಾವಾದಿಗಳಾದ, ಆಧ್ಯಾತ್ಮಿಕ ಗುರುಗಳಾದ ಗುರುದೇವ್ ಶ್ರೀ ಶ್ರೀ ರವಿಶಂಕರರ ಸಾನ್ನಿಧ್ಯದಲ್ಲಿ ನಡೆದ ವೈದಿಕ ಮಂತ್ರ ಪಠಣ ಭಜನೆ, ಡೋಲು, ತಾಳ ವಾದ್ಯಗಳ ನಾದ ಮುಗಿಲು ಮುಟ್ಟಿತು.

ಆರ್ಟ್ ಆಫ್ ಲಿವಿಂಗ್ ನ ವೈದಿಕ ಪರಂಪರೆಯ ಶಾಲೆಯಾದ ವೇದ ಆಗಮ ಸಂಸ್ಕೃತ ಮಹಾಪಾಠಶಾಲೆಯ ವೈದಿಕ ಪಂಡಿತರು ನಡೆಸಿಕೊಟ್ಟ ಮಹಾ ರುದ್ರಾಭಿಷೇಕದಿಂದ ವಾತಾವರಣವೆಲ್ಲವೂ ಪವಿತ್ರ ಕಂಪನಗಳಿಂದ ತುಂಬಿತ್ತು.


ಮಹೋತ್ಸವದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಿತು. ವಾಣಿಕ ಗುಪ್ತರವರಿಂದ ಮೋಹನ ವೀಣೆ ವಾದನ ನಡೆಯಿತು. ಮಹಾರುದ್ರ ಪೂಜೆಯ ಗುರುದೇವ್ ಶ್ರೀ ಶ್ರೀ ರವಿಶಂಕರರಿಂದ ನಿರ್ದೇಶಿತ ಧ್ಯಾನವನ್ನು ನಡೆಸಿಕೊಡಲಾಯಿತು. ಇದನ್ನು ಸಾವಿರಾರು ಸ್ಥಳಗಳಲ್ಲಿ ಜಾಲತಾಣದ ನೇರಪ್ರಸಾರ ಮಾಡಲಾಯಿತು. ” ಇಂಡಿಯ ಮೆಡಿಟೇಟ್ಸ್” ಚಳುವಳಿಯ ಅಂಗವಾಗಿ ಪ್ರತಿಯೊಂದು ಮನೆಯಲ್ಲೂ, ಉತ್ತಮ ಮಾನಸಿಕ ಆರೋಗ್ಯಕ್ಕಾಗಿ, ಆಂತರಿಕ ಶಾಂತಿಗಾಗಿ ಧ್ಯಾನ ಮಾಡಬೇಕೆಂದು ಗುರುದೇವರು ಪ್ರೋತ್ಸಾಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು