6:13 AM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಗುಂಡಿನ ದಾಳಿ: ಇಬ್ಬರು ಸ್ಥಳದಲ್ಲೇ ಸಾವು; ಸಂಬಂಧಿಕನಿಂದಲೇ ಕೃತ್ಯ?

20/02/2023, 14:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನ ಪ್ರಕಾಶ್(30) ಹಾಗೂ ಪ್ರವೀಣ್(33) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಸಾವನ್ನಪ್ಪಿದ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ ಗೆ ಬಂದೂಕು ಎಲ್ಲಿಂದ ಸಿಕ್ತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಅಥವಾ ಯಾವ ಬಂದೂಕು ಪರವಾನಗಿ ಇದೆಯಾ ಎಂಬೆಲ್ಲಾ ದೃಷ್ಠಿಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಹಾಡಹಗಲೇ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ. ಗುಂಡಿನದಾಳಿ ನಡೆಸಿದ ರಮೇಶ್ ನನ್ನ ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು