3:14 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮುಸ್ಲಿಂ ಬಾಂಧವ್ಯ ವೇದಿಕೆಯ ಆಶ್ರಯದಲ್ಲಿ ಅಲ್ಪಸಂಖ್ಯಾತ ಹಕ್ಕುಗಳ ಮಾಹಿತಿ ಶಿಬಿರ

21/02/2023, 11:57

ಮಂಗಳೂರು(reporterkarnataka.com): ಅಲ್ಪಸಂಖ್ಯಾತರ ಪ್ರಜಾಸತ್ತಾತ್ಮಕ ಮತ್ತು ರಾಜಕೀಯ ಬಲವರ್ಧನೆಯ ಬಗ್ಗೆ ಫಾರಂ ಫಾರ್ ಮೈನಾರಿಟಿ ರೈಟ್ಸ್ , ಡೆಮಾಕ್ರಟಿಕ್ ಆ್ಯಂಡ್ ಪೊಲಿಟಿಕಲ್ ಎಂಪವರ್ ಮೆಂಟ್ ಬೆಂಗಳೂರು ಮತ್ತು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇವರ ಆಶ್ರಯದಲ್ಲಿ ನಗರದ ಹಂಪನಕಟ್ಟೆಯ ಆಶೀರ್ವಾದ್ ಹಾಲ್ ನಲ್ಲಿ ಅಲ್ಪಸಂಖ್ಯಾತರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಅಧ್ಯಕ್ಷತೆ ವಹಿಸಿದ ಫಾರಂ ಫಾರ್ ಮೈನಾರಿಟಿ ಇದರ ಅಧ್ಯಕ್ಷ ಮೆಹರೋಜ್ ಖಾನ್ ” ಅಲ್ಪಸಂಖ್ಯಾತರು ದೇಶದ ರಾಜಕಾರಣದಲ್ಲಿ ಮತ್ತು ಸಾಮಾಜಿಕ ವ್ಯವಸ್ಥೆಯಲ್ಲಿ ಕ್ರಿಯಾಶೀಲ ಭೂಮಿಕೆ ನಿಭಾಯಿಸಬೇಕು. ರಾಜಕೀಯ ಕಾರಣದಿಂದ ಸಮಾಜದಲ್ಲಿ ಸೃಷ್ಟಿಯಾಗಿರುವ ಅನಗತ್ಯ ಅಂತರವನ್ನು ನಿವಾರಿಸಲು ಬಹುಸಂಖ್ಯಾತ ಸಮುದಾಯದೊಂದಿಗೆ ಸೌಹಾರ್ದ ಸ್ಥಾಪಿಸುವ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ರಾಜಕಾರಣಿಗಳ ಕೋಮು ಧ್ರುವೀಕರಣದ ರಾಜಕೀಯವನ್ನು ವಿಫಲಗೊಳಿಸಬೇಕು” ಎಂದು ಹೇಳಿದರು.

ಮುಸ್ಲಿಂ ಬಾಂಧವ್ಯ ವೇದಿಕೆಯ ಅಧ್ಯಕ್ಷ ಯಾಸೀನ್ ಶಿರೂರ್ ಮಾತನಾಡಿ” ನಾಡಿನ ಸಾಮರಸ್ಯ ಮತ್ತು ಶಾಂತಿಗಾಗಿ ವೇದಿಕೆ ನಿರಂತರ ಶ್ರಮಿಸಲಿದೆ. ಸಮುದಾಯಗಳ ನಡುವೆ ಕಾಲಕಾಲಕ್ಕೆ ಮೂಡುವ ಅಪನಂಬಿಕೆಯನ್ನು ಹೋಗಲಾಡಿಸುವ ಅಗತ್ಯ ಹಿಂದೆಂದಿಗಿಂತಲೂ ಇಂದು ಹೆಚ್ಚಿದೆ. ಮುಸ್ಲಿಂ ಬಾಂಧವ್ಯ ವೇದಿಕೆಯು ಲೇಖಕರು ಚಿಂತಕರು ಸಾಹಿತಿಗಳ ವೇದಿಕೆಯಾಗಿರುವುದು ಮಾತ್ರವಲ್ಲ ಕರ್ನಾಟಕದಲ್ಲಿ ಈ ಸ್ವರೂಪದ ಪ್ರಪ್ರಥಮ ವೇದಿಕೆಯಾಗಿದ್ದು ಮುಂಬರುವ ದಿನಗಳಲ್ಲಿ ಸಮಾಜದಲ್ಲಿ ಬಹಳ ಕ್ರಿಯಾಶೀಲ ಭೂಮಿಕೆ ನಿಭಾಯಿಸಲಿದೆ” ಎಂದು ಹೇಳಿದರು. ಮಾಹಿತಿ ಶಿಬಿರದಲ್ಲಿ ಸುರತ್ಕಲ್ ಮಾಜಿ ಶಾಸಕ ಮೊಯಿದ್ದೀನ್ ಬಾವ, ಮಾಜಿ ಮೇಯರ್ ಅಶ್ರಫ್, ಉಡುಪಿಯ ಅಲ್ ಇಬಾದ ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಬ್ದುಲ್ ಲತೀಫ್ ಮದನಿ, ಬಾಂಧವ್ಯ ವೇದಿಕೆಯ ಕಾರ್ಯದರ್ಶಿ ನಿಸಾರ್ ಆಹಮದ್, ಉಮರ್ ಕುಂಇ್ ಸಾಲೆತ್ತೂರ್, ಹಬೀಬ್ ಖಾದರ್, ಶರ್ಫುದ್ದೀನ್ ಕಾಪು, ಮುಬೀನ್ ಸುಳ್ಯ, ಶಬೀರ್ ಆಹ್ಮದ್, ಆರ್ ಎ ಲೋಹಾನಿ, ಎ ಕೆ ಕುಕ್ಕಿಲ,ಅಶ್ರಫ್ ಕುಂದಾಪುರ, ಇಖ್ಬಾಲ್ ಹಾಲಾಡಿ, ರಶೀದ್ ಊಬರ್, ಅಜೀಜ್ ಆಹ್ಮದ್ ಉಡುಪಿ, ಯು ಟಿ ಇರ್ಷಾದ್, ಸೈಫ್ ಬಜಪೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು